Featured

ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ; ಬಿಜೆಪಿಯ ಎಲ್ಲಾ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ : ದಿನೇಶ್ ಗುಂಡುರಾವ್

ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ..

ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ..

ಬೆಂಗಳೂರು: ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದ್ದು ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ” ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ. ನೂಪರ್ ಶರ್ಮಾರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ. ಈಗ ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ. ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದ್ದಾರೆ.

ಧರ್ಮ ಶ್ರೇಷ್ಟತೆಯ ವ್ಯಸನ ಅತ್ಯಂತ ಅಪಾಯಕಾರಿ. ಬಿಜೆಪಿ ನಾಯಕರು ಈ ವ್ಯಸನಕ್ಕೆ ತುತ್ತಾಗಿರುವುದಲ್ಲದೆ, ಈ ವ್ಯಸನವನ್ನು ಇಡೀ ದೇಶಾದ್ಯಾಂತ ಸಾಂಕ್ರಾಮಿಕದಂತೆ ಹರಡುತ್ತಿದ್ದಾರೆ.ದೇಶದಲ್ಲಿ ಈಗ ದ್ವೇಷದ ವಾತಾವರಣವಿದೆ. ಇದರಿಂದ ದೇಶದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದೆ. ಬಿಜೆಪಿಯವರು ಭಾರತವನ್ನು ಏನು ಮಾಡಲು ಹೊರಟಿದ್ದಾರೆ‌ ಎಂದು ಪ್ರಶ್ನಿಸಿದ್ದಾರೆ.

ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ‌ ಉಚ್ಛ ಸ್ಥಾನದಲ್ಲಿರು ಬಿಜೆಪಿಯ ಎಲ್ಲಾ ನಾಯಕರ ತಲೆಯಲ್ಲೂ ಧರ್ಮಾಂಧತೆಯ ಅಮಲು ತುಂಬಿದೆ. ನೂಪುರ್ ತಮ್ಮ ನಾಯಕರ ಅಂತರ್ಗತ ಭಾವನೆಯನ್ನೇ ಮಾತುಗಳ ಮೂಲಕ ಹೊರಹಾಕಿ ಹಿರಿಯಕ್ಕನ ಚಾಳಿ ಅನುಸರಿಸಿದ್ದಾರಷ್ಟೆ. ಏನೇ ಆದರೂ ಬಿಜೆಪಿಯವರ ಈ ಧೋರಣೆ ದೇಶದ ಸ್ವಾಸ್ಥ್ಯಕ್ಕೆ‌ ಪೂರಕವಲ್ಲ. ಇನ್ನಾದರೂ ಬದಲಾಗಿ ಬಿಜೆಪಿಯವರೇ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago