ಬೆಂಗಳೂರು: ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.
ಕೋಡಿ ಶ್ರೀಗಳ ಹೇಳಿಕೆಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. “ಕೋಡಿ ಶ್ರೀಗಳದ್ದು ವೈಯಕ್ತಿಕ ಅಭಿಪ್ರಾಯ. ನೂರಕ್ಕೆ ನೂರರಷ್ಟು ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ಹಿರಿಯ ನಾಯಕ ಅಶ್ವಥ್ ನಾರಾಯಣ್, ಸಿದ್ದರಾಮಯ್ಯ ಬಗ್ಗೆ ಕೋಡಿ ಶ್ರೀಗಳು ನೀಡಿದ ಹೇಳಿಕೆ ವೈಯಕ್ತಿಕ ಅಭಿಪ್ರಾಯ. ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂಬ ವಿಶ್ವಾಸವಿದೆ. ಈಗಷ್ಟೇ ಅಲ್ಲ ಮುಂದೆಯೂ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ನಾವು ಇನ್ನಷ್ಟು ಸಧೃಡವಾಗಲಿದ್ದೇವೆ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿಗೆ ಚುನಾವಣೆ ಕಂಡರೆ ಭಾರೀ ಹೆದರಿಕೆ. ಚುನಾವಣೆಯೆಂದರೆ ಅವರಿಗೆ ನಿದ್ದೆಯೇ ಬರಲ್ಲ. ನಾವು ಎಲ್ಲಾ ಚುನಾವಣೆಗಳು ಸಿದ್ಧರಿದ್ದೇವೆ. ನಾವು ಅಧಿಕಾರಕ್ಕೆ ಬರುವ ಮುನ್ನ ಯಾವುದೇ ಚುನಾವಣೆ ಬರುವುದಿಲ್ಲ ಎಂದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…