ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ಬುಧವಾರ ಬೆಳಿಗ್ಗೆ 7 ಗಂಟೆಗೆ ಮುಸ್ಲಿಂ ಬಾಂಧವರು ಶೇಖ್ ಸಕೀಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ನೂರಾರು ಮಂದಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿ ಭಾಗದ ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡ ಕುಡಿಯುವ ನೀರಿಗೆ ತತ್ವಾರ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಮಾಸದಲ್ಲಿ ದೇವರಿಗೆ ಮೊರೆ ಹೋದರೆ ಸಂಕಷ್ಟಗಳು ಈಡೇರುತ್ತವೆ ಎಂಬ ಭಾವನೆಯಿಂದ ಎಲ್ಲರೂ ಒಟ್ಟಾಗಿ ಸೇರಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
ಅಲ್ಲಾಹ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಮಳೆ ಬರುತ್ತದೆ. ಜನರಿಗೆ ಬಂದಿರುವಂತಹ ಕಷ್ಟಗಳು ದೂರಾಗಲಿವೆ. ಮಳೆ ಬಂದರೂ ಕಷ್ಟ, ಮಳೆ ಬಾರದೇ ಇದ್ದರೂ ಕಷ್ಟ, ಈಗ ಜನರ ಬವಣೆ ನೀಗಿಸಲು ಮಳೆ ಬರಲೇಬೇಕು. ಕುಡಿಯುವ ನೀರಿಗಾಗಿ ಪರಿತಪಿಸುವ ಜನರ ಕಷ್ಟಕ್ಕೆ ಅಲ್ಲಾಹ ಕೃಪೆ ತೋರಲಿ. ಶುದ್ಧ ಮನಸ್ಸಿನಿಂದ ಪವಿತ್ರ ರಂಜಾನ್ ಮಾಸದಲ್ಲಿ ಅಲ್ಲಾಹ ಮೊರೆ ಹೋಗಿದ್ದೇವೆ ಎಂದು ಶೇಖ್ ಸಕಿಬ್ ಸಲೀಂ ಉಮ್ರಿ ಹೇಳಿದರು.
‘ರಂಜಾನ್’ ಎಂದು ಅರಬ್ಬಿ ಭಾಷೆಯಲ್ಲಿ ಕರೆಯಲಾಗುವ ಈ ತಿಂಗಳು ಮುಸ್ಲಿಮರ ಪಾಲಿಗೆ ಬಹಳ ಶ್ರೇಷ್ಠ ತಿಂಗಳು. ಈ ತಿಂಗಳು ಪೂರ್ತಿ ಜಗತ್ತಿನ ಎಲ್ಲಾ ಪ್ರದೇಶಗಳಲ್ಲಿ ಚದುರಿ ಹೋಗಿರುವ ಮುಸ್ಲಿಮರು ಏಕಕಾಲದಲ್ಲಿ ಜತೆಯಾಗಿ ಉಪವಾಸವನ್ನು ಆಚರಿಸುವುದು ಈ ತಿಂಗಳ ವಿಶೇಷತೆ. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸುತ್ತಾರೆ.
ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಮುಖಂಡರು , ಮಹಿಳೆಯರು ಕೂಡ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಶಾಸಕ ವೇದವ್ಯಾಸ್ ಕಾಮತ್ ಕೂಡ ಪಾಲ್ಗೊಂಡಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…