ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ಬುಧವಾರ ಬೆಳಿಗ್ಗೆ 7 ಗಂಟೆಗೆ ಮುಸ್ಲಿಂ ಬಾಂಧವರು ಶೇಖ್ ಸಕೀಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ನೂರಾರು ಮಂದಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿ ಭಾಗದ ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡ ಕುಡಿಯುವ ನೀರಿಗೆ ತತ್ವಾರ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಮಾಸದಲ್ಲಿ ದೇವರಿಗೆ ಮೊರೆ ಹೋದರೆ ಸಂಕಷ್ಟಗಳು ಈಡೇರುತ್ತವೆ ಎಂಬ ಭಾವನೆಯಿಂದ ಎಲ್ಲರೂ ಒಟ್ಟಾಗಿ ಸೇರಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
ಅಲ್ಲಾಹ ಮನಸ್ಸು ಮಾಡಿದರೆ ಕ್ಷಣಾರ್ಧದಲ್ಲಿ ಮಳೆ ಬರುತ್ತದೆ. ಜನರಿಗೆ ಬಂದಿರುವಂತಹ ಕಷ್ಟಗಳು ದೂರಾಗಲಿವೆ. ಮಳೆ ಬಂದರೂ ಕಷ್ಟ, ಮಳೆ ಬಾರದೇ ಇದ್ದರೂ ಕಷ್ಟ, ಈಗ ಜನರ ಬವಣೆ ನೀಗಿಸಲು ಮಳೆ ಬರಲೇಬೇಕು. ಕುಡಿಯುವ ನೀರಿಗಾಗಿ ಪರಿತಪಿಸುವ ಜನರ ಕಷ್ಟಕ್ಕೆ ಅಲ್ಲಾಹ ಕೃಪೆ ತೋರಲಿ. ಶುದ್ಧ ಮನಸ್ಸಿನಿಂದ ಪವಿತ್ರ ರಂಜಾನ್ ಮಾಸದಲ್ಲಿ ಅಲ್ಲಾಹ ಮೊರೆ ಹೋಗಿದ್ದೇವೆ ಎಂದು ಶೇಖ್ ಸಕಿಬ್ ಸಲೀಂ ಉಮ್ರಿ ಹೇಳಿದರು.
‘ರಂಜಾನ್’ ಎಂದು ಅರಬ್ಬಿ ಭಾಷೆಯಲ್ಲಿ ಕರೆಯಲಾಗುವ ಈ ತಿಂಗಳು ಮುಸ್ಲಿಮರ ಪಾಲಿಗೆ ಬಹಳ ಶ್ರೇಷ್ಠ ತಿಂಗಳು. ಈ ತಿಂಗಳು ಪೂರ್ತಿ ಜಗತ್ತಿನ ಎಲ್ಲಾ ಪ್ರದೇಶಗಳಲ್ಲಿ ಚದುರಿ ಹೋಗಿರುವ ಮುಸ್ಲಿಮರು ಏಕಕಾಲದಲ್ಲಿ ಜತೆಯಾಗಿ ಉಪವಾಸವನ್ನು ಆಚರಿಸುವುದು ಈ ತಿಂಗಳ ವಿಶೇಷತೆ. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸುತ್ತಾರೆ.
ಈ ಸಂದರ್ಭದಲ್ಲಿ ಹಲವಾರು ಮುಸ್ಲಿಂ ಮುಖಂಡರು , ಮಹಿಳೆಯರು ಕೂಡ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಶಾಸಕ ವೇದವ್ಯಾಸ್ ಕಾಮತ್ ಕೂಡ ಪಾಲ್ಗೊಂಡಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…