Featured

ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

ಕಲಬುರಗಿ: ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಆರ್‌ ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಬುಧವಾರ ನಗರದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪಾಕಿಸ್ತಾನ, ಚೀನಾ ಹಾಗೂ ಬಾಂಗ್ಲಾದೇಶದ ಗಡಿ ಭಾಗದಲ್ಲಿ ದೇಶದ ಭೂಮಿ ಅತಿಕ್ರಮಣವಾಗಿದೆ. ಅದನ್ನು ಪಡೆದೇ ಪಡೆಯುತ್ತೇವೆ. ಸಂಬಂಧಿಸಿದವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಾರೆ. ಸಂಘವು ದೇಶದ ಭೂಮಿ ವಾಪಸ್‌ ಪಡೆಯುವಂತೆ ಮಾಡಲಿದೆ ಎಂದು ಪುನರುಚ್ಚರಿಸಿದರು.

ಸಂವಾದದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು. ಆರ್‌ ಎಸ್‌ಎಸ್‌ ಪ್ರಾಂತ ಸಂಚಾಲಕ ಖಗೇಶನ ಪಟ್ಟಣಶೆಟ್ಟಿ, ಪ್ರಮುಖರಾದ ಎಂ. ನಾಗರಾಜ, ಅರವಿಂದ ದೇಶ ಪಾಂಡೆ, ಅಶೋಕ, ಸಚಿವ ಮುರುಗೇಶ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ, ಶಶೀಲ್‌ ನಮೋಶಿ, ರಘುನಾಥ ಮಲ್ಕಾಪುರೆ ಮುಂತಾದವರಿದ್ದರು. ಮೋಹನ್‌ ಭಾಗವತ್‌ ಅವರು ಗುರುವಾರ “ಸಂಕ್ರಾಂತಿ ಉತ್ಸವ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

13 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

15 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

16 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

16 hours ago