ವೆಂಗರ (ಮಲಪ್ಪುರಂ): ರಕ್ಷಣಾ ಕಾರ್ಯದ ವೇಳೆ ರಬ್ಬರ್ ಬೋಟ್ ನಲ್ಲಿ ಹತ್ತಲು ಕಷ್ಟ ಎಂದು ಹಿಂಜರಿದ ಮಹಿಳೆಯರಿಗೆ ಧೈರ್ಯ ನೀಡಿ, ಬೆನ್ನು ಬಾಗಿಸಿ ನೀರಿನಲ್ಲಿ ಕುಳಿತು ಇನ್ನು ನನ್ನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿ ಎಂದ ಯುವಕನಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗಿದೆ.
ಬೆನ್ನ ಮೇಲೆ ಕಾಲಿಟ್ಟು ಹತ್ತುವಂತೆ ಹೇಳಿದ ಆ ಯುವಕ ಹೆಸರು ಜೈಸಲ್ ಕೆ.ಪಿ. ಇಲ್ಲಿನ ತಾನೂರ್ ಎಂಬಲ್ಲಿ ಮೀನುಗಾರನಾಗಿದ್ದಾರೆ ಜೈಸಲ್.
ನೀರಿನಲ್ಲಿ ಬಾಗಿ ಕುಳಿತು ಬೆನ್ನು ನೀಡಿ ಹತ್ತಿಕೊಳ್ಳಿ ಎಂದು ವಯಸ್ಸಾದ ಮಹಿಳೆಯೊಬ್ಬರಿಗೆ ಹೇಳಿದಾಗ, ಚಪ್ಪಲಿ ಹಾಕಿಕೊಂಡೇ ಆಕೆ ಆತನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿದ್ದಾರೆ. ಆ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು, ಅವರೂ ಮನುಷ್ಯರೇ, ಕಲ್ಲು ಅಲ್ಲ. ನೀವು ಹುಷಾರು ಎಂದು ಹೇಳಿದಾಗ ಸರದಿ ಸಾಲಿನಲ್ಲಿದ್ದ ಇನ್ನೊಬ್ಬ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಬೋಟ್ ಹತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತಿರುವ ಈ ವಿಡಿಯೊ ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…