ವೆಂಗರ (ಮಲಪ್ಪುರಂ): ರಕ್ಷಣಾ ಕಾರ್ಯದ ವೇಳೆ ರಬ್ಬರ್ ಬೋಟ್ ನಲ್ಲಿ ಹತ್ತಲು ಕಷ್ಟ ಎಂದು ಹಿಂಜರಿದ ಮಹಿಳೆಯರಿಗೆ ಧೈರ್ಯ ನೀಡಿ, ಬೆನ್ನು ಬಾಗಿಸಿ ನೀರಿನಲ್ಲಿ ಕುಳಿತು ಇನ್ನು ನನ್ನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿ ಎಂದ ಯುವಕನಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗಿದೆ.
ಬೆನ್ನ ಮೇಲೆ ಕಾಲಿಟ್ಟು ಹತ್ತುವಂತೆ ಹೇಳಿದ ಆ ಯುವಕ ಹೆಸರು ಜೈಸಲ್ ಕೆ.ಪಿ. ಇಲ್ಲಿನ ತಾನೂರ್ ಎಂಬಲ್ಲಿ ಮೀನುಗಾರನಾಗಿದ್ದಾರೆ ಜೈಸಲ್.
ನೀರಿನಲ್ಲಿ ಬಾಗಿ ಕುಳಿತು ಬೆನ್ನು ನೀಡಿ ಹತ್ತಿಕೊಳ್ಳಿ ಎಂದು ವಯಸ್ಸಾದ ಮಹಿಳೆಯೊಬ್ಬರಿಗೆ ಹೇಳಿದಾಗ, ಚಪ್ಪಲಿ ಹಾಕಿಕೊಂಡೇ ಆಕೆ ಆತನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿದ್ದಾರೆ. ಆ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು, ಅವರೂ ಮನುಷ್ಯರೇ, ಕಲ್ಲು ಅಲ್ಲ. ನೀವು ಹುಷಾರು ಎಂದು ಹೇಳಿದಾಗ ಸರದಿ ಸಾಲಿನಲ್ಲಿದ್ದ ಇನ್ನೊಬ್ಬ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಬೋಟ್ ಹತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತಿರುವ ಈ ವಿಡಿಯೊ ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…