ಬೆಂಗಳೂರು:ಉತ್ತರ ಕರ್ನಾಟಕ ಭಾಗದ ಕೊಣ್ಣೂರು ಮತ್ತಿತರೆಡೆ ಇನ್ಫೋಸಿಸ್ ಪ್ರತಿಷ್ಟಾನದ ವತಿಯಿಂದ 200 ಮನೆಗಳನ್ನು ನಿರ್ಮಿಸಿ ಕೊಡಲು ನಿರ್ಧರಿಸಲಾಗಿದೆ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ.
ಗದಗ ಜಿಲ್ಲೆಯ ನಗರಗುಂದ ತಾಲೂಕಿನ ಕೋಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈಗಾಗಲೇ ನೆರೆಪೀಡಿತ ಪ್ರದೇಶಗಳಲ್ಲಿ ನೂತನ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಅದೇ ರೀತಿ ಗದಗ ಜಿಲ್ಲೆಯಲ್ಲೂ ಪ್ರವಾಹ ಪೀಡಿತರಿಗೆ ಮನೆಗಳನ್ನು ಕಟ್ಟಿಕೊಡಲು ಸಿದ್ದರಿದ್ದೇವೆ. ಸರ್ಕಾರ ಎಷ್ಟು ಬೇಗ ಜಾಗ ಗುರುತಿಸಿ ನಮಗೆ ನೀಡುತ್ತದೆಯೋ ಅಷ್ಟು ತುರ್ತಾಗಿ ಮನೆ ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಸಧ್ಯಕ್ಕೆ ಈ ಭಾಗದಲ್ಲಿ 200 ಮನೆಗಳನ್ನು ಕಟ್ಟಿಕೊಡಲು ನಿರ್ಧರಿಸಿದ್ದೇನೆ. ಒಂದು ಕಡೆ 50 ಮತ್ತೊಂದು ಕಡೆ 50 ಹೀಗೆ 200 ಮನೆಗಳನ್ನು ಕಟ್ಟಿಕೊಡುತ್ತೇವೆ.
ಐದು ಕೋಟಿ ರೂ. ವೆಚ್ಚದಲ್ಲಿ ಸಂತ್ರಸ್ತರಿಗೆ ದಿನನಿತ್ಯದ ಸಾಮಾಗ್ರಿಗಳ ಕಿಟ್ ತಯಾರಿಸಿ ವಿತರಣೆ ಮಾಡಲಾಗಿದೆ. ಕೊಣ್ಣೂರು ಗ್ರಾಮಸ್ಥರಿಗೆ ಬೇಕಾಗಿರುವ ಸಾಮಗ್ರಿಗಳು ಹಾಗೂ ಜಾನುವಾರಗಳ ಮೇವಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…