ಬೆಂಗಳೂರು: ರಾಜ್ಯ ಸರ್ಕಾರವು ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು, ಇದರಿಂದ ನೆರೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ SDRF ದರಕ್ಕಿಂತ ಹೆಚ್ಚಿನ ದರ ಸಿಗಲಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 2021ನೇ ಜುಲೈನಿಂದ ನವೆಂಬರ್ ವರೆಗೆ ಉಂಟಾದ ಅತಿವೃಷ್ಠಿ ಹಾಗೂ ಪ್ರವಾಹದಿಂದ ಸಂತ್ರಸ್ತರಾದ ವಿವಿಧ ವರ್ಗದ ಜನರ ಹಿತರಕ್ಷಣೆಗೆ ಸರ್ಕಾರವು ಹಲವಾರು ಪರಿಹಾರ ಕ್ರಮಗಳನ್ನು ಕೈಗೊಂಡಿದೆ.
ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. 2021ನೇ ಜುಲೈ ನಿಂದ ನವೆಂಬರ್ ವರೆಗೆ ಉಂಟಾದ ನೆರೆ ಹಾವಳಿಯಿಂದ 12.52 ಲಕ್ಷ ಹೆಕ್ಟೇರ್ ಬೆಳೆ ಹಾನಿಗೊಂಡ ರೈತರಿಗೆ ಪರಿಹಾರ ದೊರೆಯಲಿದೆ.
ಈವರೆಗೆ ಸುಮಾರು 14.4 ಲಕ್ಷ ರೈತರ ಬ್ಯಾಂಕ್ ಖಾತೆಗೆ ರೂ.926.40 ಕೋಟಿ ಮೊತ್ತವನ್ನು ಜಮೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಲ್ಲಿ ಸುಮಾರು 12.90 ಲಕ್ಷ ರೈತರಿಗೆ ರೂ.796 ಕೋಟಿ ಬೆಳೆಹಾನಿ ಪರಿಹಾರ ಪಾವತಿಸಿರೋದಾಗಿ ತಿಳಿಸಿದೆ.
ಇನ್ನೂ ಮನೆಗಳ ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ರೂ.50,000 ದಿಂದ 5 ಲಕ್ಷದವರೆಗೆ ಪರಿಹಾರ ನೀಡಲಾಗುತ್ತಿದೆ. ಇದು ಎನ್ ಡಿ ಆರ್ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ಪರಿಹಾರಕ್ಕಿಂತ ದುಪ್ಪಟ್ಟಾಗಿದೆ. ಈವರೆಗೆ 23,872 ಮನೆಗಳಿಗೆ ರೂ.171.20 ಕೋಟಿ ಪರಿಹಾರ ಪಾವತಿ ಸಾಲಗಿದೆ ಎಂದು ತಿಳಿಸಿದೆ.
ಜಲಾವೃತ ಕುಟುಂಬಗಳಿಗೆ ರಾಜ್ಯದ ಹೆಚ್ಚುವರಿ ಮೊತ್ತ ಸೇರಿ ಒಟ್ಟು 10 ಸಾವಿರದಂತೆ ತುರ್ತು ಪರಿಹಾರ ಪಾವತಿ ಹಣ ನೀಡಲಾಗಿದೆ. ಇದಕ್ಕಾಗಿ ಈವರೆಗೆ 85,860 ಕುಟುಂಬಗಳಿಗೆ ಈ ಪರಿಹಾರ ಪಾವತಿಸಲಾಗಿದೆ. ಪ್ರವಾಹದಿಂದ ಬಾಧಿತರಾದ ಸಂತ್ರಸ್ತರ ನೆರವಿಗಾಗಿ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ಸರ್ಕಾರದಿಂದ 3,326.86 ಕೋಟಿ ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದೆ.
ಅಂದಹಾಗೇ ಮಳೆಯಾಶ್ರಿತ ಬೆಳೆ ಪರಿಹಾರಕ್ಕಾಗಿ ಎಸ್ ಡಿ ಆರ್ ಎಪ್ ಮಾರ್ಗಸೂಚಿದರ 6,800 ಇದ್ದದ್ದನ್ನು ರಾಜ್ಯ ಸರ್ಕಾರ 6,800 ಹೆಚ್ಚುವರಿಗೊಳಿಸಿ ಪರಿಷ್ಕೃತ ದರದಲ್ಲಿ ರೂ.13,600 ನಿಗದಿ ಪಡಿಸಲಾಗಿದೆ.
ನೀರಾವರಿ ಬೆಳೆ ಪರಿಹಾರಕ್ಕೆ ರೂ.13,500 ಎಸ್ ಡಿ ಆರ್ ಎಫ್ ಮಾರ್ಗಸೂಚಿ ದರವನ್ನ ರಾಜ್ಯ ಸರ್ಕಾರದ ದುಪ್ಪಟ್ಟುಗೊಳಿಸಿ ರೂ.25,500 ನಿಗದಿ ಪಡಿಸಿದೆ. ತೋಟಗಾರಿಕೆ ಬೆಳೆಹಾನಿ ಪರಿಹಾರಕ್ಕೆ 18,000 ಇದ್ದಂತ ಪರಿಹಾರಕ್ಕೆ ರೂ.10 ಸಾವಿರ ಸೇರಿಸಿ 28 ಸಾವಿರಕ್ಕೆ ಪರಿಷ್ಕರಿಸಲಾಗಿದೆ.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…