Featured

ನೆರೆ ಸಂತ್ರಸ್ತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಒಮನ್ ನಲ್ಲಿ ಕೆಲಸ ಕಳೆದುಕೊಂಡ ಕೇರಳದ ವ್ಯಕ್ತಿ

ಆ 20:  ಜಲ ಪ್ರಳಯಕ್ಕೆ ತತ್ತರಿಸಿರುವ ಕೇರಳದ ನೆರೆ ಸಂತ್ರಸ್ತರಿಗೆ ದೇಶ ವಿದೇಶದಿಂದ ನೆರವಿನ ಮಹಾಪೂರಾ ಹರಿದು ಬರುತ್ತಿದೆ. ಆದರೆ ತನ್ನದೇ ರಾಜ್ಯದ ನಿರಾಶ್ರಿತರ ಬಗ್ಗೆ ಹೊರದೇಶದಲ್ಲಿರುವ ಕೇರಳಿಗನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಬರಹವನ್ನು ಪೋಸ್ಟ್ ಮಾಡಿ ತನ್ನ ಉದ್ಯೋಗವನ್ನೇ ಕಳೆದುಕೊಂಡಿದ್ದಾನೆ.

ರಾಹುಲ್​ ಚೆರು ಪಾಲಯಟ್ಟು ಈ ರೀತಿ ಅಸಭ್ಯವಾಗಿ ಬರಹ ಪೋಸ್ಟ್ ಮಾಡಿದ ವ್ಯಕ್ತಿ. ಈತ ಒಮನ್‌ನಲ್ಲಿ ಲುಲು ಗ್ರೂಪ್ ಇಂಟರ್‌ನ್ಯಾಶನಲ್ ಕಂಪೆನಿಯಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ. ಈತ ಕೇರಳದ ಪ್ರವಾಹ ಸಂತ್ರಸ್ತರ ನೆರವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ ಪೋಸ್ಟ್ ಮಾಡಿದ್ದಾನೆ ಎಂಬ ಕಾರಣಕ್ಕೆ ಈತನನ್ನು ಗಲ್ಫ್​ ಮೂಲದ ಕಂಪನಿ ಕೆಲಸದಿಂದ ತೆಗೆದು ಹಾಕಿ ತಕ್ಕ ಪಾಠ ಕಲಿಸಿದೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಜತೆಗೆ ಮಹಿಳೆಯರಿಗೆ ಸ್ಯಾನಿಟರಿ ವಸ್ತುಗಳ ಅಗತ್ಯವಿದ್ದು, ಅದಕ್ಕೆ ಸ್ವಯಂಪ್ರೇರಿತರಾಗಿ ಸಹಾಯ ಮಾಡಬೇಕೆಂಬ ಮನವಿಯ, ಫೇಸ್‌ಬುಕ್ ಬರಹಕ್ಕೆ ರಾಹುಲ್ ಕೆಟ್ಟದಾಗಿ ಪ್ರತಿಕ್ರಿಯೆ ನೀಡಿದ್ದ.ರಾಹುಲ್ ನ ಈ ಕಮೆಂಟ್ ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಅಸಭ್ಯ ವರ್ತನೆ ಹಾಗೂ ಅವಹೇಳನಕಾರಿ ಕಾಮೆಂಟ್​ ಮಾಡಿದ ಹಿನ್ನಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ ಲುಲು ಗ್ರೂಪ್ ಕಂಪೆನಿಯ ಮುಖ್ಯ ಸಂಪರ್ಕ ಅಧಿಕಾರಿ ನಂದಕುಮಾರ್ ರಾಹುಲ್‌ನನ್ನು ತಕ್ಷಣದಿಂದ ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನಮ್ಮ ಕಂಪನಿ ಮಾನವೀಯತೆ ಮತ್ತು ನೈತಿಕ ನಿಲುವನ್ನು ಹೊಂದಿದ್ದು, ಈ ರೀತಿ ವರ್ತನೆ ತೋರಿದ ಹಿನ್ನಲೆ ನಾವು ತಕ್ಷಣಕ್ಕೆ ಕ್ರಮ ಕೈಗೊಂಡಿದ್ದೇವೆ. ಈ ಬಗ್ಗೆ ಸ್ಪಷ್ಟವಾಗಿ ಅವರಿಗೆ ಸಂದೇಶವನ್ನು ಕೂಡ ನೀಡಿದ್ದೇವೆ ಕಂಪನಿಯ ಎಚ್.ಆರ್ ಸ್ಪಷ್ಟಪಡಿಸಿದ್ದಾರೆ

ಈ ಬೆಳವಣಿಗೆಗಳ ನಂತರ , ಸಾಮಾಜಿಕ ಜಾಲತಾಣದಲ್ಲಿ ಬರೆದ ತನ್ನ ಬರಹಕ್ಕೆ ಕ್ಷಮೆಯಾಚಿಸುವೆ. ಫೇಸ್‌ಬುಕ್ ಸಂದೇಶ ಹಾಕುವಾಗ ಅದೊಂದು ದೊಡ್ಡ ತಪ್ಪು ಎಂದು ಅರಿವಾಗಲಿಲ್ಲ ಎಂದು ರಾಹುಲ್ ಕ್ಷಮೆಯಾಚಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

10 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

10 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

10 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

13 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

13 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

14 hours ago