Featured

ನೆರೆ ಸಂತ್ರಸ್ತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಒಮನ್ ನಲ್ಲಿ ಕೆಲಸ ಕಳೆದುಕೊಂಡ ಕೇರಳದ ವ್ಯಕ್ತಿ

ಆ 20:  ಜಲ ಪ್ರಳಯಕ್ಕೆ ತತ್ತರಿಸಿರುವ ಕೇರಳದ ನೆರೆ ಸಂತ್ರಸ್ತರಿಗೆ ದೇಶ ವಿದೇಶದಿಂದ ನೆರವಿನ ಮಹಾಪೂರಾ ಹರಿದು ಬರುತ್ತಿದೆ. ಆದರೆ ತನ್ನದೇ ರಾಜ್ಯದ ನಿರಾಶ್ರಿತರ ಬಗ್ಗೆ ಹೊರದೇಶದಲ್ಲಿರುವ ಕೇರಳಿಗನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಬರಹವನ್ನು ಪೋಸ್ಟ್ ಮಾಡಿ ತನ್ನ ಉದ್ಯೋಗವನ್ನೇ ಕಳೆದುಕೊಂಡಿದ್ದಾನೆ.

ರಾಹುಲ್​ ಚೆರು ಪಾಲಯಟ್ಟು ಈ ರೀತಿ ಅಸಭ್ಯವಾಗಿ ಬರಹ ಪೋಸ್ಟ್ ಮಾಡಿದ ವ್ಯಕ್ತಿ. ಈತ ಒಮನ್‌ನಲ್ಲಿ ಲುಲು ಗ್ರೂಪ್ ಇಂಟರ್‌ನ್ಯಾಶನಲ್ ಕಂಪೆನಿಯಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ. ಈತ ಕೇರಳದ ಪ್ರವಾಹ ಸಂತ್ರಸ್ತರ ನೆರವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ ಪೋಸ್ಟ್ ಮಾಡಿದ್ದಾನೆ ಎಂಬ ಕಾರಣಕ್ಕೆ ಈತನನ್ನು ಗಲ್ಫ್​ ಮೂಲದ ಕಂಪನಿ ಕೆಲಸದಿಂದ ತೆಗೆದು ಹಾಕಿ ತಕ್ಕ ಪಾಠ ಕಲಿಸಿದೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಜತೆಗೆ ಮಹಿಳೆಯರಿಗೆ ಸ್ಯಾನಿಟರಿ ವಸ್ತುಗಳ ಅಗತ್ಯವಿದ್ದು, ಅದಕ್ಕೆ ಸ್ವಯಂಪ್ರೇರಿತರಾಗಿ ಸಹಾಯ ಮಾಡಬೇಕೆಂಬ ಮನವಿಯ, ಫೇಸ್‌ಬುಕ್ ಬರಹಕ್ಕೆ ರಾಹುಲ್ ಕೆಟ್ಟದಾಗಿ ಪ್ರತಿಕ್ರಿಯೆ ನೀಡಿದ್ದ.ರಾಹುಲ್ ನ ಈ ಕಮೆಂಟ್ ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಅಸಭ್ಯ ವರ್ತನೆ ಹಾಗೂ ಅವಹೇಳನಕಾರಿ ಕಾಮೆಂಟ್​ ಮಾಡಿದ ಹಿನ್ನಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ ಲುಲು ಗ್ರೂಪ್ ಕಂಪೆನಿಯ ಮುಖ್ಯ ಸಂಪರ್ಕ ಅಧಿಕಾರಿ ನಂದಕುಮಾರ್ ರಾಹುಲ್‌ನನ್ನು ತಕ್ಷಣದಿಂದ ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನಮ್ಮ ಕಂಪನಿ ಮಾನವೀಯತೆ ಮತ್ತು ನೈತಿಕ ನಿಲುವನ್ನು ಹೊಂದಿದ್ದು, ಈ ರೀತಿ ವರ್ತನೆ ತೋರಿದ ಹಿನ್ನಲೆ ನಾವು ತಕ್ಷಣಕ್ಕೆ ಕ್ರಮ ಕೈಗೊಂಡಿದ್ದೇವೆ. ಈ ಬಗ್ಗೆ ಸ್ಪಷ್ಟವಾಗಿ ಅವರಿಗೆ ಸಂದೇಶವನ್ನು ಕೂಡ ನೀಡಿದ್ದೇವೆ ಕಂಪನಿಯ ಎಚ್.ಆರ್ ಸ್ಪಷ್ಟಪಡಿಸಿದ್ದಾರೆ

ಈ ಬೆಳವಣಿಗೆಗಳ ನಂತರ , ಸಾಮಾಜಿಕ ಜಾಲತಾಣದಲ್ಲಿ ಬರೆದ ತನ್ನ ಬರಹಕ್ಕೆ ಕ್ಷಮೆಯಾಚಿಸುವೆ. ಫೇಸ್‌ಬುಕ್ ಸಂದೇಶ ಹಾಕುವಾಗ ಅದೊಂದು ದೊಡ್ಡ ತಪ್ಪು ಎಂದು ಅರಿವಾಗಲಿಲ್ಲ ಎಂದು ರಾಹುಲ್ ಕ್ಷಮೆಯಾಚಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

8 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

8 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

9 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago