ಬೆಂಗಳೂರು :ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಜಾಹಿರಾತು
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…