ನೆಲ್ಯಾಡಿ : ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇಂದು ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಸಮಯ ಹೆದ್ದಾರಿಗೆ ಮಣ್ಣು ಬಿದ್ದು ಸಂಪೂರ್ಣ ಹೆದ್ದಾರಿ ಬಂದ್ ಆಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಪದೇ ಪದೇ ಹೆದ್ದಾರಿ ಮಣ್ಣು ಬೀಳುತ್ತಿದ್ದರೂ ಯಾವುದೇ ಶಾಶ್ವತ ಕ್ರಮ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು, ಪ್ರಯಾಣಿಕರು ಆಕೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದೆ ಹೋಗಲಾಗದೆ, ಬಹಳ ಹೊತ್ತು ಟ್ರಾಫಿಕ್ ಜಾಂ ಉಂಟಾಯಿತು. ನಂತರ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿವೆ. ಸ್ಥಳಕ್ಕೆ ನೆಲ್ಯಾಡಿ ಹೋರಾಟಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಕಳೆದ ವಾರವೂ ಇಲ್ಲಿ ಮಣ್ಣು ಕುಸಿದು ಮೂರು ಗಂಟೆ ಕಾಲ ಹೆದ್ದಾರಿ ಬಂದ್ ಆಗಿತ್ತು. ಮಳೆಗಾಲ ಆರಂಭಗೊಂಡ ಮೇಲೆ ಇಲ್ಲಿ ಐದಾರು ಬಾರಿ ಮಣ್ಣು ಕುಸಿದಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…