ನೆಲ್ಯಾಡಿ : ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇಂದು ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಸಮಯ ಹೆದ್ದಾರಿಗೆ ಮಣ್ಣು ಬಿದ್ದು ಸಂಪೂರ್ಣ ಹೆದ್ದಾರಿ ಬಂದ್ ಆಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಪದೇ ಪದೇ ಹೆದ್ದಾರಿ ಮಣ್ಣು ಬೀಳುತ್ತಿದ್ದರೂ ಯಾವುದೇ ಶಾಶ್ವತ ಕ್ರಮ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು, ಪ್ರಯಾಣಿಕರು ಆಕೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದೆ ಹೋಗಲಾಗದೆ, ಬಹಳ ಹೊತ್ತು ಟ್ರಾಫಿಕ್ ಜಾಂ ಉಂಟಾಯಿತು. ನಂತರ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿವೆ. ಸ್ಥಳಕ್ಕೆ ನೆಲ್ಯಾಡಿ ಹೋರಾಟಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಕಳೆದ ವಾರವೂ ಇಲ್ಲಿ ಮಣ್ಣು ಕುಸಿದು ಮೂರು ಗಂಟೆ ಕಾಲ ಹೆದ್ದಾರಿ ಬಂದ್ ಆಗಿತ್ತು. ಮಳೆಗಾಲ ಆರಂಭಗೊಂಡ ಮೇಲೆ ಇಲ್ಲಿ ಐದಾರು ಬಾರಿ ಮಣ್ಣು ಕುಸಿದಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…