Featured

ನೆಹರೂ ಬದಲಿಗೆ ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರಧಾನಿಯಾಗಿದ್ದರೆ, ಕಾಶ್ಮೀರ ಸಮಸ್ಯೆ ಉದ್ಬವಿಸುತ್ತಿರಲಿಲ್ಲ-ಅಮಿತ್​ ಶಾ -Vishwanews24

ನವದೆಹಲಿ :ಕಾಶ್ಮೀರ ಸಮಸ್ಯೆ ಕಗ್ಗಂಟಾಗಿ ಉಳಿಯಲು ದೇಶದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ಅವರು ಕಾರಣ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು  ಆರೋಪಿಸಿದ್ದಾರೆ.

1947 ರಲ್ಲಿ ಜವಾಹರ್​ಲಾಲ್​ ನೆಹರೂ ಬದಲಿಗೆ ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರಧಾನಿಯಾಗಿದ್ದರೆ, ಇಂತಹ ಯಾವುದೇ ಸಮಸ್ಯೆಗಳೇ ಉದ್ಬವಿಸುತ್ತಿರಲಿಲ್ಲ ಎಂದು ಹೇಳಿದರು.

ಸರ್ದಾರ್ ಪಟೇಲ್ ಅವರು ಹೈದರಾಬಾದ್ ಅನ್ನು ನಿಭಾಯಿಸಿದರು. ಹೀಗಾಗಿ ಅದು ಈಗ ಭಾರತದ ಗೌರವಯುತ ಭಾಗವಾಗಿದೆ. ಆದರೆ ನೆಹರೂ ಕಾಶ್ಮೀರವನ್ನು ನಿಭಾಯಿಸಿದ್ದರಿಂದ ಅದು ಇಂದಿಗೂ ಸಮಸ್ಯೆಯಾಗಿಯೇ ಉಳಿದಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಾಕಿಸ್ಥಾನ ಕಾಶ್ಮೀರಕ್ಕಾಗಿ ಉಗ್ರವಾದವನ್ನು ಮಾಡುತ್ತಿದೆ. ಈ ಸಮಸ್ಯೆಗೆ ಯಾರಾದರೂ ಜವಾಬ್ಧಾರಾಗಿದ್ದರೆ ಅದು ನೆಹರೂ. ಸರ್ದಾರ್‌ ಪಟೇಲ್‌ ಅವರು ಅಂದು ಪ್ರಧಾನಿಯಾಗಿರುತ್ತಿದ್ದರೆ ಈ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಾಯಕರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೈ ನಾಯಕರ ಟೀಕೆಗೆ ಎದಿರೇಟು ನೀಡಿದರು.  ಪ್ರಧಾನಿ ದೇಶಕ್ಕಾಗಿ  18 ಗಂಟೆಗಳ ನಿರಂತರ ಕೆಲಸ ಮಾಡುತ್ತಿದ್ದಾರೆ. ದೇಶದ ರಕ್ಷಣೆಗೆ ಅವರು ಸದಾ ಸಿದ್ಧರಿದ್ದಾರೆ.  ನೀವು ನಿರಂತರ ಆರೋಪ ಮಾಡುವುದರಿಂದ ಪ್ರಧಾನಿ ಮೇಲಿನ ಜನರ ನಂಬಿಕೆಯನ್ನ ಕಸಿದುಕೊಳ್ಳಲು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದರು.
Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago