Featured

ನೆಹರೂ ಬದಲಿಗೆ ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರಧಾನಿಯಾಗಿದ್ದರೆ, ಕಾಶ್ಮೀರ ಸಮಸ್ಯೆ ಉದ್ಬವಿಸುತ್ತಿರಲಿಲ್ಲ-ಅಮಿತ್​ ಶಾ -Vishwanews24

ನವದೆಹಲಿ :ಕಾಶ್ಮೀರ ಸಮಸ್ಯೆ ಕಗ್ಗಂಟಾಗಿ ಉಳಿಯಲು ದೇಶದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ಅವರು ಕಾರಣ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು  ಆರೋಪಿಸಿದ್ದಾರೆ.

1947 ರಲ್ಲಿ ಜವಾಹರ್​ಲಾಲ್​ ನೆಹರೂ ಬದಲಿಗೆ ಸರ್ದಾರ್​ ವಲ್ಲಭಭಾಯಿ ಪಟೇಲ್​ ಪ್ರಧಾನಿಯಾಗಿದ್ದರೆ, ಇಂತಹ ಯಾವುದೇ ಸಮಸ್ಯೆಗಳೇ ಉದ್ಬವಿಸುತ್ತಿರಲಿಲ್ಲ ಎಂದು ಹೇಳಿದರು.

ಸರ್ದಾರ್ ಪಟೇಲ್ ಅವರು ಹೈದರಾಬಾದ್ ಅನ್ನು ನಿಭಾಯಿಸಿದರು. ಹೀಗಾಗಿ ಅದು ಈಗ ಭಾರತದ ಗೌರವಯುತ ಭಾಗವಾಗಿದೆ. ಆದರೆ ನೆಹರೂ ಕಾಶ್ಮೀರವನ್ನು ನಿಭಾಯಿಸಿದ್ದರಿಂದ ಅದು ಇಂದಿಗೂ ಸಮಸ್ಯೆಯಾಗಿಯೇ ಉಳಿದಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಾಕಿಸ್ಥಾನ ಕಾಶ್ಮೀರಕ್ಕಾಗಿ ಉಗ್ರವಾದವನ್ನು ಮಾಡುತ್ತಿದೆ. ಈ ಸಮಸ್ಯೆಗೆ ಯಾರಾದರೂ ಜವಾಬ್ಧಾರಾಗಿದ್ದರೆ ಅದು ನೆಹರೂ. ಸರ್ದಾರ್‌ ಪಟೇಲ್‌ ಅವರು ಅಂದು ಪ್ರಧಾನಿಯಾಗಿರುತ್ತಿದ್ದರೆ ಈ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನಾಯಕರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೈ ನಾಯಕರ ಟೀಕೆಗೆ ಎದಿರೇಟು ನೀಡಿದರು.  ಪ್ರಧಾನಿ ದೇಶಕ್ಕಾಗಿ  18 ಗಂಟೆಗಳ ನಿರಂತರ ಕೆಲಸ ಮಾಡುತ್ತಿದ್ದಾರೆ. ದೇಶದ ರಕ್ಷಣೆಗೆ ಅವರು ಸದಾ ಸಿದ್ಧರಿದ್ದಾರೆ.  ನೀವು ನಿರಂತರ ಆರೋಪ ಮಾಡುವುದರಿಂದ ಪ್ರಧಾನಿ ಮೇಲಿನ ಜನರ ನಂಬಿಕೆಯನ್ನ ಕಸಿದುಕೊಳ್ಳಲು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದರು.
Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

15 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

17 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

18 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

18 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

18 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

18 hours ago