Featured

ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ : ಸಿದ್ದರಾಮಯ್ಯ – vishwanews24

ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳು ಸೃಷ್ಟಿಸುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು : ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು.

ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , RSS ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು. ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago