ಉಡುಪಿ: ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸರು ಅಭಿನಂದನಾರ್ಹರು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಹೇಳಿದ್ದಾರೆ.
ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ನಾಲ್ವರ ಭೀಕರ ಕೊಲೆ ಪ್ರಕರಣ ಉಡುಪಿ ಜಿಲ್ಲೆಯ ಮಟ್ಟಿಗೆ ಒಂದು ರೀತಿಯ ಕಪ್ಪು ಚುಕ್ಕೆಯಾಗಿತ್ತು. ಘಟನೆಯಿಂದಾಗಿ ಜನರು ಭಯಭೀತರಾಗಿದ್ದು ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಕ್ಷಿಪ್ರ ಕಾರ್ಯಚರಣೆ ನಡೆಸಿ 5 ತನಿಖಾ ತಂಡಗಳನ್ನು ರಚಿಸಿ ಘಟನೆ ನಡೆದ ಮೂರು ದಿನಗಳ ಒಳಗಡೆ ಆರೋಪಿಯ ಜಾಡನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ. ಹಾಗೂ ಅವರ ತಂಡಕ್ಕೆ ಉಡುಪಿ ಜನತೆಯ ಪರವಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…