ಉಡುಪಿ: ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವಾಗಿದ್ದು ಪ್ರತಿಯೊಬ್ಬರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ.
ಬೇರೆ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ ಇಂತಹ ಕ್ರೂರ ಕೊಲೆಗಳು ನಡೆದಿರುವುದು ಮಾಧ್ಯಮಗಳಿಂದ ಕೇಳೀದ್ದು, ಅಂತಹುದೇ ಘಟನೆ ಸುಶಿಕ್ಷತರ ಜಿಲ್ಲೆಯಾದ ಉಡುಪಿಯಲ್ಲಿ ನಡೆದಿರುವುದು ಅತ್ಯಂತ ಕಳವಳಕಾರಿಯಾಗಿದೆ. ಇಡೀ ಕುಟುಂಬವನ್ನೇ ಭೀಕರ ರೀತಿಯಲ್ಲಿ ಕೊಲೆ ಮಾಡಿ ಸರ್ವನಾಶ ಮಾಡಿರುವುದು ಆರೋಪಿಯು ಎಂತಹ ಕ್ರೂರ ಮನಸ್ಥಿತಿಯನ್ನು ಹೊಂದಿದ್ದಾನೆ ಎನ್ನುವುದು ಊಹಿಸಲು ಕೂಡ ಸಾಧ್ಯವಿಲ್ಲದಂತಾಗಿದೆ. ಈ ಘಟನೆಯನ್ನು ನೋಡುವಾಗ ನಿಜವಾಗಿಯೂ ಪ್ರತಿಯೊಬ್ಬರಲ್ಲೂ ಆತಂಕ ಮೂಡಲು ಕಾರಣವಾಗಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯವಾಗಿದೆ.
ಈ ಪ್ರಕರಣದ ಬಗ್ಗೆ ಪೋಲಿಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದು, ಆದಷ್ಟು ಬೇಗ ಆರೋಪಿಯನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕಿದೆ. ಈ ಕೃತ್ಯ ಇಡೀ ಜಿಲ್ಲೆಗೆ ದೊಡ್ಡ ಕಳಂಕವಾಗಿದ್ದು ಪೊಲೀಸ್ ಇಲಾಖೆ ಕೊಲೆಗಾರನನ್ನು ಹಿಡಿದು ಕೊಲೆಗೆ ನೈಜ ಕಾರಣವನ್ನು ಕಂಡು ಹುಡುಕುವುದರ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಾಗಿದೆ. ಹಂತಕನನ್ನು ಶೀಘ್ರವಾಗಿ ಪತ್ತೆ ಹಚ್ಚುವುದರ ಮೂಲಕ ಜಿಲ್ಲೆಯ ನಾಗರಿಕರಿಗೆ ರಕ್ಷಣೆಯ ಭರವಸೆ ನೀಡುವ ಕೆಲಸ ನಡೆಯಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…