ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.7ಕ್ಕೆ ಕಾಯ್ದಿರಿಸಿದೆ.
ಫೆ.20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವ ಕುರಿತು ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು, ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.
ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ, ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆ ಆಗುತ್ತದೆ ಎಂಬುದಾಗಿ ಆಕ್ಷೇಪಣೆ ಸಲ್ಲಿಸಿದರು. ಈ ವಾದ ಪ್ರತಿವಾದ ವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಈ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.7ಕ್ಕೆ ಕಾಯ್ದಿರಿಸಿ ಆದೇಶ ನೀಡಿದರು.
ಇದೇ ದಿನ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಕೂಡ ನ್ಯಾಯಾಧೀಶರು ನೀಡ ಲಿದ್ದಾರೆ. ಈ ಅರ್ಜಿಗೂ ವಿಶೇಷ ಸರಕಾರಿ ಅಭಿಯೋಜಕರು, ಆಕ್ಷೇಪ ಸಲ್ಲಿಸಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…