Featured

ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ – vishwanews24

ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ

ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.7ಕ್ಕೆ ಕಾಯ್ದಿರಿಸಿದೆ.

ಫೆ.20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವ ಕುರಿತು ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು, ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.

ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ, ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆ ಆಗುತ್ತದೆ ಎಂಬುದಾಗಿ ಆಕ್ಷೇಪಣೆ ಸಲ್ಲಿಸಿದರು. ಈ ವಾದ ಪ್ರತಿವಾದ ವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಈ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.7ಕ್ಕೆ ಕಾಯ್ದಿರಿಸಿ ಆದೇಶ ನೀಡಿದರು.

ಇದೇ ದಿನ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಕೂಡ ನ್ಯಾಯಾಧೀಶರು ನೀಡ ಲಿದ್ದಾರೆ. ಈ ಅರ್ಜಿಗೂ ವಿಶೇಷ ಸರಕಾರಿ ಅಭಿಯೋಜಕರು, ಆಕ್ಷೇಪ ಸಲ್ಲಿಸಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

30 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

43 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

56 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago