ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ.
ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಇದೀಗ ಆರೋಪಿ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಆದರೂ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸುವಾಗ ಜೀವ ಬೆದರಿಕೆ ಎದುರಾ ಗುತ್ತದೆ ಎಂಬ ತಪ್ಪು ಗ್ರಹಿಕೆಯನ್ನು ಮಾಡಲಾಗಿದೆ. ಅದಕ್ಕಾಗಿ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ಆರೋಪಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಕೂಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಹೈಕೋರ್ಟ್ ತಡೆಯಾಜ್ಞೆಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…