ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಆದೇಶ ನೀಡಿದೆ.
ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು. ಆ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜು.18ರಂದು ನಡೆಯಬೇಕಾಗಿದ್ದ ಸಾಕ್ಷಿಗಳ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ನೀಡಿದರು ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭ ಬೆಂಗಳೂರಿನ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…