ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು.
ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ಅವರು ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಸಾವಿರಾರು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ.
ಇತ್ತೀಚೆಗೆ ತನ್ನ ಹೊಸ ನಾಟಕ ರಚನೆಯನ್ನು ಮಾಡಿದ್ದ ಇವರು ಅದರಲ್ಲಿ ಯಶಸ್ವಿಯಾಗುವ ಆಶಾಭಾವನೆ ಹೊಂದಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…