ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – vishwanews24
ಸೀರಿಯಲ್ ನಟಿಯ ಜೊತೆ ಪ್ರೀತಿ ; ಮದುವೆಗೆ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ
ಬೆಂಗಳೂರು: ಮದುವೆಗೆ ಸೀರಿಯಲ್ ನಟಿ ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಿವ್ ಇನ್ ಸಂಬಂಧದಲ್ಲಿದ್ದ ಜೋಡಿ ಮಂಗಳವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿತ್ತು. ಈ ಪಾರ್ಟಿಯಲ್ಲಿ ಮದನ್ ಗೆಳತಿಯ ಬಳಿ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆದರೆ ನಟಿ ವೀಣಾ ಮದುವೆಗೆ ಒಪ್ಪದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ – vishwanews24
ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕ ಮದನ್ ಇವೆಂಟ್ ಮ್ಯಾನೇಜ್ ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ಸಿರಿಯಲ್ ಸೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದಳು. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.
ಈ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವೀಣಾ ಧಾರಾವಾಹಿ ಜೊತೆಗೆ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾಳೆ.
