ಬೆಂಗಳೂರು: ಮದುವೆಗೆ ಸೀರಿಯಲ್ ನಟಿ ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಿವ್ ಇನ್ ಸಂಬಂಧದಲ್ಲಿದ್ದ ಜೋಡಿ ಮಂಗಳವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿತ್ತು. ಈ ಪಾರ್ಟಿಯಲ್ಲಿ ಮದನ್ ಗೆಳತಿಯ ಬಳಿ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆದರೆ ನಟಿ ವೀಣಾ ಮದುವೆಗೆ ಒಪ್ಪದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕ ಮದನ್ ಇವೆಂಟ್ ಮ್ಯಾನೇಜ್ ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ಸಿರಿಯಲ್ ಸೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದಳು. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.
ಈ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವೀಣಾ ಧಾರಾವಾಹಿ ಜೊತೆಗೆ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾಳೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…