ಬೆಂಗಳೂರು: ಮದುವೆಗೆ ಸೀರಿಯಲ್ ನಟಿ ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಿವ್ ಇನ್ ಸಂಬಂಧದಲ್ಲಿದ್ದ ಜೋಡಿ ಮಂಗಳವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿತ್ತು. ಈ ಪಾರ್ಟಿಯಲ್ಲಿ ಮದನ್ ಗೆಳತಿಯ ಬಳಿ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆದರೆ ನಟಿ ವೀಣಾ ಮದುವೆಗೆ ಒಪ್ಪದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವಕ ಮದನ್ ಇವೆಂಟ್ ಮ್ಯಾನೇಜ್ ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದನು. ಈ ವೇಳೆ ಸಿರಿಯಲ್ ಸೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದಳು. ವೀಣಾಳನ್ನ ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ ಮದನ್, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.
ಈ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ಸೀರಿಯಲ್ ನಟಿ ವೀಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವೀಣಾ ಧಾರಾವಾಹಿ ಜೊತೆಗೆ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾಳೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…