ಆಂಧ್ರಪ್ರದೇಶ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಾದೇವಿ ಅವರನ್ನು ಮೇಡಿಪಲ್ಲಿ ಸತ್ಯಂ 12 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ರೂಪಾದೇವಿ ಮೇಡ್ಚಲ್ ಮುನಿರಾಬಾದ್ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್ನ ದವೇರಿಯಾ ವಿಲ್ಲಾಸ್ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್ನ ಅಲ್ವಾಲ್ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗ ಯೋಜಿತ್ (11) ಮತ್ತು ಮಗಳು ರಿಷಿಕಾ ಶ್ರೀ (9).
ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ರೂಪಾದೇವಿ ವೀಡಿಯೋ ಕಾಲ್ ಮಾಡಿ ಶಾಸಕ ಸತ್ಯಂಗೆ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ತಕ್ಷಣ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…