ಮುಂಬೈ: ಬಾಲಿವುಡ್ ಪ್ರಖ್ಯಾತ ಕಿರುತೆರೆ ನಟ ಕುಶಾಲ್ ಪಂಜಾಬಿ(37) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈ ನಿವಾಸದಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಸುದ್ದಿಯನ್ನು ಕಿರುತೆರೆ ನಟ ಕರಣ್ವೀರ್ ಬೊಹ್ರಾ ತಮ್ಮ ಟ್ವಿಟರ್ ಖಾತೆಯ ಮೂಲಕ ಹಂಚಿಕೊಂಡು, ನಿನ್ನ ನಿಧನ ನನ್ನನ್ನು ಶಾಕ್ಗೆ ದೂಡಿದೆ. ಈ ಕ್ಷಣದವರೆಗೂ ನನಗೆ ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇದರೊಂದಿಗೆ ಅನೇಕ ಬಾಲಿವುಡ್ ಕಲಾವಿದರು ಸಹ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಇನ್ನು ಪೊಲೀಸರಿಗೆ ಘಟನಾ ಸ್ಥಳದಲ್ಲಿ ಡೆತ್ನೋಟ್ ಲಭ್ಯವಾಗಿದ್ದು, ಸಾವಿಗೆ ಯಾರೂ ಹೊಣೆಯಲ್ಲ ಎಂದು ಬರೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ. ಅಲ್ಲದೆ, ಖಿನ್ನತೆಯಿಂದ ಬಳಲುತ್ತಿದ್ದರು. ಆದರೆ, ಇಂತಹ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಊಹೆ ಮಾಡಿರಲಿಲ್ಲ ಎಂದು ಸಹ ಕಲಾವಿದ ಚೇತನ್ ಹನ್ಸರಾಜ್ ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಶ್ಕ್ ಮೆಂ ಮರ್ಜಾವಾಂ, ಮೌಥ್ ಫುಲ್ ಆಫ್ ಸ್ಕೈ, ಲವ್ ಮ್ಯಾರೇಜ್, ದೇಖೋ ಮಗರ್ ಪ್ಯಾರ್ ಸೆ, ಕಭೀ ಹಾಂ ಕಭೀ ನಾಂ,.ಯೆ ದಿಲ್ ಚಾಹೇ ಮೋರ್, ಫಿಯರ್ ಫ್ಯಾಕ್ಟರ್, ಕಸಂ ಸೆ, ಅಂತರಿಕ್ಷ್, ಹಮ್ ತುಮ್, ಜೋರ್ ಕಾ ಜಟ್ಕಾ, ಆಸ್ ಮಾನ್ ಸೆ ಆಗೆ, ತೇರಿ ಮೇರಿ ಲವ್ ಸ್ಟೋರಿ ಹಾಗೂ ರಾಜಾ ಕೀ ಆಯೇಗಿ ಬಾರಾತ್ ಮೊದಲಾದ ಧಾರವಾಹಿ ಹಾಗೂ ಕಿರುತೆರೆ… ಕಾರ್ಯಕ್ರಮಗಳಲ್ಲಿ ನಟಿಸಿದ್ದರು. ಇನ್ನು ಸಲಾಂ ಎ ಇಶ್ಕ್, ಧನ್ ಧನಾ ಧನ್ ಗೋಲ್, ಕ್ರೀಜಿ ಕುಕ್ಕಡ್ ಫ್ಯಾಮಿಲಿ, ಹಮ್ ಕೋ ಇಶ್ಕ್ ನೆ ಮಾರಾ ಮೊದಲಾದ ಸಿನಿಮಾಗಲ್ಲೂ ನಟಿಸಿದ್ದರು….
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…