Featured

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..Vishwanews24

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..

ನವದೆಹಲಿ: ಪ್ರತಿ ವರ್ಷ ಆಚರಿಸಲಾಗುವ ಸ್ವತಂತ್ರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯನ್ನು ಈ ಬಾರಿ ‘ಪರಾಕ್ರಮ ದಿನ’ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ಸಂಸ್ಕೃತಿ ಸಚಿವಾಲಯ ಜನವರು 23, 2021 ರಂದು ಸುಭಾಶ್ ಚಂದ್ರ ಬೋಸ್ ಜಯಂತಿ ಆಚರಿಸಲಾಗುವುದು ಎಂದು ಹೇಳಿದೆ.

ಜನವರಿ 23, 2021 ರಂದು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ಉತ್ಸವವನ್ನು ಆಚರಿಸಲಾಗುತ್ತಿದೆ. ಈ ದಿನದಂದೇ ಕೇಂದ್ರ ಸರ್ಕಾರ ಅವರ ಜನ್ಮದಿನವನ್ನು ಪರಾಕ್ರಮ ದಿನ ರೂಪದಲ್ಲಿ ಆಚರಿಸಲಿದೆ.

ಇದಕ್ಕೆ ಸಂಬಂಧಿಸಿದಂತೆ ತನ್ನ ಅಧಿಸೂಚನೆಯಲ್ಲಿ ಬರೆದುಕೊಂಡಿರುವ ಸಂಸ್ಕೃತಿ ಇಲಾಖೆ, ” ಭಾರತದ ಜನರು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ವರ್ಷವನ್ನು ದೇಶಕ್ಕೆ ಈ ಮಹಾನ್ ನಾಯಕ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸುತ್ತಾರೆ. ಹೀಗಾಗಿ ಭಾರತ ಸರ್ಕಾರ ಸುಭಾಶ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಜನವರಿ 23, 2021ಕ್ಕೆ ಆರಂಭಿಸುವ ನಿರ್ಯಾಯ ಕೈಗೊಂಡಿದೆ. ಈ ದಿನದಂದು ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಅವರನ್ನು ಸತ್ಕರಿಸಲಾಗುವುದು” ಎಂದು ಹೇಳಿದೆ.

“ರಾಷ್ಟ್ರದ ಪ್ರತಿ ಬೋಸ್ ಅವರಿಗಿದ್ದ ಅದಮ್ಯ ಭಾವನೆ ಹಾಗೂ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲ ಇನ್ನು ಮುಂದೆ ಪ್ರತಿ ವರ್ಷ ಜನವರಿ 23 ರಂದು ಅವರ ಜನ್ಮದಿನವನ್ನು ‘ಪರಾಕ್ರಮ ದಿನ’ವೆಂದು ಆಚರಿಸಲಾಗುವುದು. ಇದರಿಂದ ದೇಶದ ಜನತೆ ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ವಿಪತ್ತುಗಳನ್ನು ಎದುರಿಸಲು ನೇತಾಜಿ ಅವರ ಜೀವನದಿಂದ ಪ್ರೇರಣೆ ಸಿಗಲಿದೆ ಮತ್ತು ಅವರಲ್ಲಿ ದೇಶಭಕ್ತಿ ಹಾಗೂ ಸಾಹಸದ ಭಾವನೆ ತುಂಬಿಕೊಳ್ಳಲಿದೆ” ಎಂದು ಇಲಾಖೆ ಹೇಳಿದೆ.

ಬೋಸ್ ಅವರ 125ನೇ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಖುದ್ದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕೊಲ್ಕತಾದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಶಾಮೀಲಾಗಲಿದ್ದಾರೆ ಹಾಗೂ ನೇತಾಜಿ ಸುಭಾಸ್ ಚಂದ್ರ ಮೆಮೋರಿಯಲ್ ಸಂಗ್ರಹಾಲಯವನ್ನು ಕೂಡ ಉದ್ಘಾಟಿಸಲಿದ್ದಾರೆ..

ಬಿಜೆಪಿ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು, ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು : ಡಿ.ವಿ. ಸದಾನಂದ ಗೌಡ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago