Featured

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..Vishwanews24

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನವನ್ನು’ಪರಾಕ್ರಮ ದಿನ’ವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ..

ನವದೆಹಲಿ: ಪ್ರತಿ ವರ್ಷ ಆಚರಿಸಲಾಗುವ ಸ್ವತಂತ್ರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯನ್ನು ಈ ಬಾರಿ ‘ಪರಾಕ್ರಮ ದಿನ’ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ಸಂಸ್ಕೃತಿ ಸಚಿವಾಲಯ ಜನವರು 23, 2021 ರಂದು ಸುಭಾಶ್ ಚಂದ್ರ ಬೋಸ್ ಜಯಂತಿ ಆಚರಿಸಲಾಗುವುದು ಎಂದು ಹೇಳಿದೆ.

ಜನವರಿ 23, 2021 ರಂದು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ಉತ್ಸವವನ್ನು ಆಚರಿಸಲಾಗುತ್ತಿದೆ. ಈ ದಿನದಂದೇ ಕೇಂದ್ರ ಸರ್ಕಾರ ಅವರ ಜನ್ಮದಿನವನ್ನು ಪರಾಕ್ರಮ ದಿನ ರೂಪದಲ್ಲಿ ಆಚರಿಸಲಿದೆ.

ಇದಕ್ಕೆ ಸಂಬಂಧಿಸಿದಂತೆ ತನ್ನ ಅಧಿಸೂಚನೆಯಲ್ಲಿ ಬರೆದುಕೊಂಡಿರುವ ಸಂಸ್ಕೃತಿ ಇಲಾಖೆ, ” ಭಾರತದ ಜನರು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ವರ್ಷವನ್ನು ದೇಶಕ್ಕೆ ಈ ಮಹಾನ್ ನಾಯಕ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸುತ್ತಾರೆ. ಹೀಗಾಗಿ ಭಾರತ ಸರ್ಕಾರ ಸುಭಾಶ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಜನವರಿ 23, 2021ಕ್ಕೆ ಆರಂಭಿಸುವ ನಿರ್ಯಾಯ ಕೈಗೊಂಡಿದೆ. ಈ ದಿನದಂದು ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಅವರನ್ನು ಸತ್ಕರಿಸಲಾಗುವುದು” ಎಂದು ಹೇಳಿದೆ.

“ರಾಷ್ಟ್ರದ ಪ್ರತಿ ಬೋಸ್ ಅವರಿಗಿದ್ದ ಅದಮ್ಯ ಭಾವನೆ ಹಾಗೂ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲ ಇನ್ನು ಮುಂದೆ ಪ್ರತಿ ವರ್ಷ ಜನವರಿ 23 ರಂದು ಅವರ ಜನ್ಮದಿನವನ್ನು ‘ಪರಾಕ್ರಮ ದಿನ’ವೆಂದು ಆಚರಿಸಲಾಗುವುದು. ಇದರಿಂದ ದೇಶದ ಜನತೆ ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ವಿಪತ್ತುಗಳನ್ನು ಎದುರಿಸಲು ನೇತಾಜಿ ಅವರ ಜೀವನದಿಂದ ಪ್ರೇರಣೆ ಸಿಗಲಿದೆ ಮತ್ತು ಅವರಲ್ಲಿ ದೇಶಭಕ್ತಿ ಹಾಗೂ ಸಾಹಸದ ಭಾವನೆ ತುಂಬಿಕೊಳ್ಳಲಿದೆ” ಎಂದು ಇಲಾಖೆ ಹೇಳಿದೆ.

ಬೋಸ್ ಅವರ 125ನೇ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಖುದ್ದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕೊಲ್ಕತಾದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಶಾಮೀಲಾಗಲಿದ್ದಾರೆ ಹಾಗೂ ನೇತಾಜಿ ಸುಭಾಸ್ ಚಂದ್ರ ಮೆಮೋರಿಯಲ್ ಸಂಗ್ರಹಾಲಯವನ್ನು ಕೂಡ ಉದ್ಘಾಟಿಸಲಿದ್ದಾರೆ..

ಬಿಜೆಪಿ ಶಿಸ್ತು ಉಳಿಸಿಕೊಂಡರೆ ಮಾತ್ರ ಪಕ್ಷ ಸದೃಢವಾಗಿ ಬೆಳೆಯಬಲ್ಲದು, ಇಲ್ಲವಾದರೆ ಕಾಂಗ್ರೆಸ್ ಸ್ಥಿತಿಯೇ ಬರಬಹುದು : ಡಿ.ವಿ. ಸದಾನಂದ ಗೌಡ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago