ನವದೆಹಲಿ: ಪ್ರತಿ ವರ್ಷ ಆಚರಿಸಲಾಗುವ ಸ್ವತಂತ್ರ ಸೇನಾನಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯನ್ನು ಈ ಬಾರಿ ‘ಪರಾಕ್ರಮ ದಿನ’ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ಸಂಸ್ಕೃತಿ ಸಚಿವಾಲಯ ಜನವರು 23, 2021 ರಂದು ಸುಭಾಶ್ ಚಂದ್ರ ಬೋಸ್ ಜಯಂತಿ ಆಚರಿಸಲಾಗುವುದು ಎಂದು ಹೇಳಿದೆ.
ಜನವರಿ 23, 2021 ರಂದು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ಉತ್ಸವವನ್ನು ಆಚರಿಸಲಾಗುತ್ತಿದೆ. ಈ ದಿನದಂದೇ ಕೇಂದ್ರ ಸರ್ಕಾರ ಅವರ ಜನ್ಮದಿನವನ್ನು ಪರಾಕ್ರಮ ದಿನ ರೂಪದಲ್ಲಿ ಆಚರಿಸಲಿದೆ.
ಇದಕ್ಕೆ ಸಂಬಂಧಿಸಿದಂತೆ ತನ್ನ ಅಧಿಸೂಚನೆಯಲ್ಲಿ ಬರೆದುಕೊಂಡಿರುವ ಸಂಸ್ಕೃತಿ ಇಲಾಖೆ, ” ಭಾರತದ ಜನರು ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿ ವರ್ಷವನ್ನು ದೇಶಕ್ಕೆ ಈ ಮಹಾನ್ ನಾಯಕ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸುತ್ತಾರೆ. ಹೀಗಾಗಿ ಭಾರತ ಸರ್ಕಾರ ಸುಭಾಶ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಜನವರಿ 23, 2021ಕ್ಕೆ ಆರಂಭಿಸುವ ನಿರ್ಯಾಯ ಕೈಗೊಂಡಿದೆ. ಈ ದಿನದಂದು ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಅವರನ್ನು ಸತ್ಕರಿಸಲಾಗುವುದು” ಎಂದು ಹೇಳಿದೆ.
“ರಾಷ್ಟ್ರದ ಪ್ರತಿ ಬೋಸ್ ಅವರಿಗಿದ್ದ ಅದಮ್ಯ ಭಾವನೆ ಹಾಗೂ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲ ಇನ್ನು ಮುಂದೆ ಪ್ರತಿ ವರ್ಷ ಜನವರಿ 23 ರಂದು ಅವರ ಜನ್ಮದಿನವನ್ನು ‘ಪರಾಕ್ರಮ ದಿನ’ವೆಂದು ಆಚರಿಸಲಾಗುವುದು. ಇದರಿಂದ ದೇಶದ ಜನತೆ ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ವಿಪತ್ತುಗಳನ್ನು ಎದುರಿಸಲು ನೇತಾಜಿ ಅವರ ಜೀವನದಿಂದ ಪ್ರೇರಣೆ ಸಿಗಲಿದೆ ಮತ್ತು ಅವರಲ್ಲಿ ದೇಶಭಕ್ತಿ ಹಾಗೂ ಸಾಹಸದ ಭಾವನೆ ತುಂಬಿಕೊಳ್ಳಲಿದೆ” ಎಂದು ಇಲಾಖೆ ಹೇಳಿದೆ.
ಬೋಸ್ ಅವರ 125ನೇ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಖುದ್ದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕೊಲ್ಕತಾದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಶಾಮೀಲಾಗಲಿದ್ದಾರೆ ಹಾಗೂ ನೇತಾಜಿ ಸುಭಾಸ್ ಚಂದ್ರ ಮೆಮೋರಿಯಲ್ ಸಂಗ್ರಹಾಲಯವನ್ನು ಕೂಡ ಉದ್ಘಾಟಿಸಲಿದ್ದಾರೆ..
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…