Featured

ನೇಹಾ ಕೊಲೆ ಪ್ರಕರಣ: ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ : ಸಿಐಡಿ ಅಧಿಕಾರಿಗಳ ಸ್ಪಷ್ಟನೆ – vishwanews24

ನೇಹಾ ಕೊಲೆ ಪ್ರಕರಣ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್ (ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

ಕೊಲೆಯಾದ 81 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು 483 ಪುಟಗಳ ಚಾರ್ಜ್​ ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​​ ಶೀಟ್​ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್​ ಹುಬ್ಬಳ್ಳಿಯ ಪಿಸಿ ಜಾಬಿನ್​ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. ನಂತರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್​ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಮನಸ್ತಾಪ ಉಂಟಾಯಿತು. ಬಳಿಕ ನೇಹಾ ಆರೋಪಿ ಫಯಾಜ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

ಇದರಿಂದ ಫಯಾಜ್ ಹತಾಶಗೊಂಡು ನೇಹಾಳನ್ನು ಕೊಲೆ ಮಾಡಬೇಕೆಂದು ನಿರ್ಧಿರಿಸಿದ್ದನು. ಹೀಗಾಗಿ, ಏಪ್ರಿಲ್​ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಏಪ್ರಿಲ್​ 15 ರಂದು ಧಾರವಾಡದ ಆರ್ಯ ಸೂಪರ್​ ಬಜಾರ್​ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್​ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ. ನಂತರ ಬಳಿಕ ನ್ಯೂ ಸಾಯಿ ಗಾರ್ಮೆಂಟ್​ನಲ್ಲಿ ಟೋಪಿ ಕೆಂಪು ಟೋಪಿ ಖರೀದಿಸಿದ್ದಾನೆ.

ಬಳಿಕ ಏಪ್ರಿಲ್​ 18 ರಂದು ಫಯಾಜ್​ ಬಿವಿಬಿ ಕಾಲೇಜಿಗೆ ಬಂದು ನೇಹಾ ಎದುರು “ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈ ನಿನ್ನನ್ನು ಬಿಡುವುದಿಲ್ಲವೆಂದು ಸಂಜೆ 4:40ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಚಾಕು ಅಲ್ಲೆ ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ​

ಆರೋಪಿ ಫಯಾಜ್​ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ) 341 (ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 (ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.ಹುಬ್ಬಳ್ಳಿ, ಜುಲೈ 10: ಹುಬ್ಬಳ್ಳಿ-ಧಾರವಾಡ  ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ  ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್ (Love Jihad)​ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago