ಹುಬ್ಬಳ್ಳಿ,: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನೇಹಾ ಕುಟುಂಬವನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ ಸಿಐಡಿಗೆ ಕೊಟ್ಟಿದ್ದೇವೆ. ಇದಕ್ಕಾಗಿ ವಿಶೇಷ ನ್ಯಾಯಾಲಯ ಮಾಡಬೇಕು. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು. ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿಯವರು ಯಾವುದಾದರೂ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದಾರಾ..? ಅಧಿಕಾರದಲ್ಲಿ ಇದ್ದಾಗ ಒಂದು ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನಾನು ಅಧಿಕಾರದಲ್ಲಿರುವಾಗ ಅನೇಕ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಇದನ್ನ ಬಿಜೆಪಿ ರಾಕೀಯವಾಗಿ ಬಳಸುವುದು ಸರಿಯಲ್ಲಾ ಎಂದು ಸಿಎಂ ಕಿಡಿಕಾರಿದರು.
ಕಾಂಗ್ರೆಸ್ ಜನರ ಆಸ್ತಿ ಕಿತ್ತುಕೊಳ್ಳುತ್ತಿದೆ ಎಂಬ ಮೋದಿ ಹೇಳಿಕೆ ಬಗ್ಗೆ ಮಾತನಾಡಿ, 15 ಲಕ್ಷ ಅಕೌಂಟ್ಗೆ ಹಾಕಿದ್ದಾರಾ.? 2 ಕೋಟಿ ಉದ್ಯೋಗ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ..? ಡಾಲರ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿದ್ರಾ ಎಂದು ಸಿಎಂ ತಿರುಗೇಟು ನೀಡಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…