ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…