ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…