Featured

ನೈಟ್ ಕರ್ಫ್ಯೂ ಹಿನ್ನೆಲೆ : ಡಿ. 29 ರಿಂದ ಜ. 4ರ ವರೆಗೆ ಎಲ್ಲಾ ಫ್ಲೈಓವರ್‌ ಬಂದ್ – Vishwanews24

ನೈಟ್ ಕರ್ಫ್ಯೂ ಹಿನ್ನೆಲೆ : ಡಿ. 29 ರಿಂದ ಜ. 4ರ ವರೆಗೆ ಎಲ್ಲಾ ಫ್ಲೈಓವರ್‌ ಬಂದ್ – Vishwanews24

10 ಗಂಟೆ ಬಳಿಕ ಯಾವುದೇ ವ್ಯವಹಾರಗಳಿಗೂ ಅವಕಾಶ ಇಲ್ಲ..

ಕಮಲ್ ಪಂಥ್ ಖಡಕ್ ವಾರ್ನಿಂಗ್ ..

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್‍ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್‍ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್‍ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

13 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

15 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

15 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

15 hours ago