Featured

ನೈಟ್ ಕರ್ಫ್ಯೂ ಹಿನ್ನೆಲೆ : ಡಿ. 29 ರಿಂದ ಜ. 4ರ ವರೆಗೆ ಎಲ್ಲಾ ಫ್ಲೈಓವರ್‌ ಬಂದ್ – Vishwanews24

ನೈಟ್ ಕರ್ಫ್ಯೂ ಹಿನ್ನೆಲೆ : ಡಿ. 29 ರಿಂದ ಜ. 4ರ ವರೆಗೆ ಎಲ್ಲಾ ಫ್ಲೈಓವರ್‌ ಬಂದ್ – Vishwanews24

10 ಗಂಟೆ ಬಳಿಕ ಯಾವುದೇ ವ್ಯವಹಾರಗಳಿಗೂ ಅವಕಾಶ ಇಲ್ಲ..

ಕಮಲ್ ಪಂಥ್ ಖಡಕ್ ವಾರ್ನಿಂಗ್ ..

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವ ಹಿನ್ನೆಲೆ ಡಿಸೆಂಬರ್ 29 ರಿಂದ ಜನವರಿ 4ರ ವರೆಗೆ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುತ್ತದೆ. ಅನಗತ್ಯ ಓಡಾಡಿದರೆ ಕೇಸ್ ಹಾಕಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, ನೈಟ್ ಕರ್ಫ್ಯೂ ಹಿನ್ನೆಲೆ ಎಲ್ಲಾ ಕಡೆ ವಾಹನ ತಪಾಸಣೆ ನಡೆಯುತ್ತದೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಮತ್ತು ತುರ್ತು ಸೇವೆಗೆ ಅವಕಾಶ ನೀಡಲಾಗಿದೆ. ಇವತ್ತು ಪ್ಲೈಓವರ್ ಕ್ಲೋಸ್ ಇರೋಲ್ಲ. ಮೊದಲ ದಿನ ಆದ್ದರಿಂದ ಇವತ್ತು ಮಾಡ್ತಾ ಇಲ್ಲ. ನಾಳೆಯಿಂದ ಎಲ್ಲಾ ಪ್ಲೈ ಓವರ್ ಕ್ಲೋಸ್ ಆಗುತ್ತೆ. ಬೇಕಾಬಿಟ್ಟಿ ಓಡಾಟ ನಡೆಸಿದರೆ ಗಾಡಿ ಸೀಜ್ ಮಾಡುಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜನರಿಗೆ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲು ಆನ್‍ಲೈನ್ ಬುಕ್ಕಿಂಗ್ ಮಾಡಲು ಸೂಚನೆ ಕೊಡಲಾಗಿದೆ. ಆನ್‍ಲೈನ್ ಬುಕ್ಕಿಂಗ್ ಬಿಟ್ಟು ಬೇರೆ ಯಾರಿಗೂ ಓಡಾಡೋದಕ್ಕೆ ಅವಕಾಶ ಇಲ್ಲ. ಯಾವ್ಯಾವ ಬಿಗಿ ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳಲಾಗ್ತಾ ಇದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಂದೋಬಸ್ತು ಮಾಡಿಕೊಳ್ಳಲಾಗುತ್ತದೆ. ಬಾರ್, ಪಬ್, ರೆಸ್ಟೋರೆಂಟ್‍ಗಳ ಮೇಲೆ ತೀವ್ರ ನಿಗಾ ಇಡಬೇಕು. ಯಾವುದೇ ಕಾರಣಕ್ಕೂ ರಾತ್ರಿ 10 ಗಂಟೆ ಬಳಿಕ ಪಬ್, ಬಾರ್, ರೆಸ್ಟೋರೆಂಟ್ ಓಪನ್ ಇರದಂತೆ ನೋಡಬೇಕು. 9 ಗಂಟೆಯಿಂದಲೇ ಮೈಕ್ ಮೂಲಕ ಅನೌನ್ಸ್ ಮಾಡಬೇಕು. ಜೊತೆಗೆ ಹೊಯ್ಸಳಗಳು ಸದಾ ಗಸ್ತಿನಲ್ಲಿ ಇರುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

5 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

6 hours ago