ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಸಂದರ್ಭ ‘ಪರೀಕ್ಷಾ ಪೇ ಚರ್ಚಾ’ವನ್ನು 2018ರಿಂದ ನಡೆಸಿಕೊಂಡು ಬರುತ್ತಿದ್ದಾರೆ.
ಈ ಬಾರಿಯೂ ಆಸಕ್ತ ವಿದ್ಯಾರ್ಥಿಗಳು ಪ್ರಧಾನಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಳ್ಳಬಹುದು . ಪರೀಕ್ಷಾ ಪೆ ಚರ್ಚಾ ಎಂಬುದು ವಾರ್ಷಿಕ ಕಾರ್ಯಕ್ರಮವಾಗಿದ್ದು, ಬೋರ್ಡ್ ಪರೀಕ್ಷೆಗಳಿಗೆ ಮುಂಚಿತವಾಗಿ ಪಿಎಂ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ. ಇದರ ನೋಂದಣಿ ಪ್ರಕ್ರಿಯೆ ನಾಳೆ ಡಿಸೆಂಬರ್ 28 ರಂದು ಪ್ರಾರಂಭವಾಗಲಿದೆ.
ಸಂವಾದದ ಸಮಯದಲ್ಲಿ, ಪಿಎಂ ಮೋದಿ ಅವರು ರಾಷ್ಟ್ರದಾದ್ಯಂತದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಮತ್ತು ಪರೀಕ್ಷೆಯ ಒತ್ತಡ ಮತ್ತು ಸಂಬಂಧಿತ ವಿಷಯಗಳ ಕುರಿತು ಅವರ ಗೊಂದಲಗಳನ್ನು ಪರಿಹರಿಸುತ್ತಾರೆ .
9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಜೊತೆಗೆ, ಪಾಲಕರು ಸಹ ಪರೀಕ್ಷಾ ಪೆ ಚರ್ಚಾದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಪರೀಕ್ಷಾ ಪೆ ಚರ್ಚಾ ದಿನಾಂಕ ಮತ್ತು ಸಮಯವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಪರೀಕ್ಷಾ ಪೆ ಚರ್ಚಾದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಾಳೆಯಿಂದ mygov.in ನಲ್ಲಿ ನೋಂದಾಯಿಸಿಕೊಳ್ಳಬಹುದು.ಕಳೆದ ವರ್ಷ ಏಪ್ರಿಲ್ 7 ರಂದು ಪರೀಕ್ಷಾ ಪೆ ಚರ್ಚಾ ನಡೆದಿತ್ತು. ಡಿಸೆಂಬರ್ 28 ರಿಂದ ಜನವರಿ 20 ರವರೆಗೆ ನೋಂದಣಿಗೆ ಅವಕಾಶವಿರಲಿದೆ.
ಪರೀಕ್ಷಾ ಪೇ ಚರ್ಚಾಗೆ ಆಯ್ಕೆ ಹೇಗೆ?
‘ಪರೀಕ್ಷಾ ಪೇ ಚರ್ಚಾ’ಗೆ ಪ್ರವೇಶವು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಕೆಲವು ಆನ್ಲೈನ್ ಸ್ಪರ್ಧೆಗಳನ್ನು ಆಧರಿಸಿರುತ್ತದೆ. ವಿಜೇತರು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಸಂವಾದ ನಡೆಸುವ ಅವಕಾಶವನ್ನು ಪಡೆಯುತ್ತಾರೆ. ಈ ವಿಶೇಷ ವಿಜೇತರು ತಮ್ಮ ಹಸ್ತಾಕ್ಷರದ ಛಾಯಾಚಿತ್ರದ ಡಿಜಿಟಲ್ ಸ್ಮರಣಿಕೆಯನ್ನು ಪಡೆಯುತ್ತಾರೆ. ಅವರಿಗೆ ಭಾಗವಹಿಸುವಿಕೆ ಪ್ರಮಾಣ ಪತ್ರವನ್ನೂ ನೀಡಲಾಗುವುದು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…