ಹೊಸದಿಲ್ಲಿ: ನೋಟು ನಿಷೇಧ ಕುರಿತ ಸರಕಾರದ ಅಧಿಸೂಚನೆಯು ಕಾನೂನುಬಾಹಿರವಾಗಿದೆ ಹಾಗೂ ನೋಟು ನಿಷೇಧ ಪ್ರಕ್ರಿಯೆಯನ್ನು ಕೇಂದ್ರವು ಆರಂಭಿಸಬಾರದಿತ್ತು ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ justice BV Nagarathna ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು 4:1 ಬಹುಮತದೊಂದಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರ ಎತ್ತಿಹಿಡಿದ ಸಂದರ್ಭದಲ್ಲಿ ಜಸ್ಟಿಸ್ ನಾಗರತ್ನ ತಮ್ಮ ತೀವ್ರ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು “ಕಾನೂನುಬಾಹಿರ” ಎಂದು ಕರೆದ ಜಸ್ಟಿಸ್ ನಾಗರತ್ನ “ನನ್ನ ಅಭಿಪ್ರಾಯದಲ್ಲಿ, ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ ಅಧಿಕಾರ. ಹೀಗಾಗಿ ಅದು ಕಾನೂನು ಬಾಹಿರ. ಅದನ್ನು ಜಾರಿಗೊಳಿಸಿದ ರೀತಿ ಕಾನೂನಿಗೆ ಅನುಸಾರವಾಗಿಲ್ಲ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…