Featured

ನೋಡಿ ನಿಮ್ಮ ಇಂದಿನ ರಾಶಿ ಭವಿಷ್ಯ : 02-11-2021 -Vishwanews24

ನೋಡಿ ನಿಮ್ಮ ಇಂದಿನ ರಾಶಿ ಭವಿಷ್ಯ : 02-11-2021 -Vishwanews24

ಮೇಷ : ಈ ದಿನವು ನಿಮಗೆ ಉತ್ತಮವಾಗಿ ಇರಲಿದೆ. ನೀವು ಅಂದುಕೊಂಡ ಕಾರ್ಯಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಲಿದ್ದೀರಿ.

ವೃಷಭ : ಯಾವುದೇ ಕೆಲಸವನ್ನು ಆರಂಭಿಸುವ ಮುನ್ನವೇ ನಕಾರಾತ್ಮಕವಾಗಿ ಚಿಂತಿಸುವುದನ್ನು ಬಿಟ್ಟುಬಿಡಿ.

ಮಿಥುನ : ಇನ್ನೊಬ್ಬರ ಜೊತೆ ಸೇರಿ ಮಾಡುವ ಎಲ್ಲಾ ಕೆಲಸಗಳಲ್ಲೂ ನೀವಿಂದು ಯಶಸ್ಸು ಕಾಣುವಿರಿ. ಯಾಕೋ ಮನಸ್ಸಿಗೆ ಅತೀವವಾಗಿ ನೋವುಂಟಾಗುವ ಘಟನೆಗೆ ಸಾಕ್ಷಿಯಾಗುವುದರಿಂದ ಕಚೇರಿ ಕೆಲಸಕ್ಕೆ ವಿರಾಮ ಪಡೆಯುವಿರಿ.

ಕಟಕ : ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸೇರಿ ಪ್ರವಾಸಿ ತಾಣಗಳಿಗೆ ತೆರಳಲಿದ್ದೀರಿ. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ. ಜವಳಿ ಉದ್ಯಮಿಗಳು, ಹಣ್ಣಿನ ವ್ಯಾಪಾರಿಗಳು ಇಂದು ಅನಿರೀಕ್ಷಿತ ಮಟ್ಟದಲ್ಲಿ ಲಾಭ ಗಳಿಸಲಿದ್ದಾರೆ.

ಸಿಂಹ : ಎದುರಾಳಿಗಳನ್ನು ಸೋಲಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಹೊಸ ಸ್ನೇಹಿತರು ನಿಮಗೆ ಸಿಗಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿ ಇರಲಿದೆ. ಖರ್ಚಿನ ಸಂಖ್ಯೆ ಹೆಚ್ಚಾಗಲಿದೆ.

ಕನ್ಯಾ : ನಿಮ್ಮ ನಡವಳಿಕೆಗಳಿಂದ ಸಾರ್ವಜನಿಕ ಜೀವನದಲ್ಲಿ ಗೌರವವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಸಂಗಾತಿಯು ನಿಮ್ಮೆಲ್ಲ ಪ್ರಯತ್ನಗಳಿಗೆ ಸಂಯಮದಿಂದ ಸಾಥ್​ ನೀಡಲಿದ್ದಾರೆ.

ತುಲಾ : ತಂದೆಯ ಮಾತುಗಳು ನಿಮ್ಮ ಮನಸ್ಸಿಗೆ ಚುಚ್ಚಲಿದೆ. ಆದರೂ ಕೋಪದ ಕೈಗೆ ಬುದ್ಧಿ ನೀಡಬೇಡಿ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.

ವೃಶ್ಚಿಕ : ಬೇರೆಯವರ ಸಹಾಯ ಪಡೆದು ಅಂದುಕೊಂಡಿದ್ದನ್ನು ಸಾಧಿಸಲಿದ್ದೀರಿ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಸ್ನೇಹಿತ ಹೆಗಲಾಗಲಿದ್ದಾನೆ. .

ಧನು : ನಿಮ್ಮ ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗುವಂತಹ ಘಟನೆಯೊಂದು ನಡೆಯಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಅನಗತ್ಯ ವಿವಾದ ಉಂಟಾಗಬಹುದು.

ಮಕರ : ಹೊಸ ಉದ್ಯಮ ಆರಂಭಿಸಿರುವ ನೀವು ಇದರಲ್ಲಿ ಲಾಭ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾದಿದೆ.

ಕುಂಭ : ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ನೀವು ಚಿಂತೆಗೀಡಾಗಲಿದ್ದೀರಿ. ಈ ಸಂದರ್ಭದಲ್ಲಿ ಪಿತ್ರಾರ್ಜಿತ ಆಸ್ತಿ ನಿಮ್ಮ ಉಪಯೋಗಕ್ಕೆ ಬರಲಿದೆ.

ಮೀನ : ಕುಟುಂಬಸ್ಥರೊಂದಿಗೆ ಇಂದು ಉತ್ತಮವಾಗಿ ಸಮಯ ಕಳೆಯಲಿದ್ದೀರಿ. ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಇದು ಉತ್ತಮ ದಿನವಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago