Featured

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ವಾಹನಗಳ ಫೋಟೋ ತೆಗೆದು ಶೇರ್ ಮಾಡಿದ್ದಲ್ಲಿ ಅವರಿಗೆ 500 ರೂ. ಬಹುಮಾನ  : ನಿತಿನ್ ಗಡ್ಕರಿ – Vishwanews24

ನೋ ಪಾರ್ಕಿಂಗ್‌ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಹೊಸ ಯೋಜನೆ ರೂಪಿಸಿದ ಕೇಂದ್ರ..

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ವಾಹನಗಳ ಫೋಟೋ ತೆಗೆದು ಶೇರ್ ಮಾಡಿದ್ದಲ್ಲಿ ಅವರಿಗೆ 500 ರೂ. ಬಹುಮಾನ ..

ನವದೆಹಲಿ: ಸಿಕ್ಕ ಸಿಕ್ಕ ಜಾಗಗಳಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್ ಮಾಡುವ ಅಭ್ಯಾಸವನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಕಾಣುತ್ತದೆ. ಆದರೂ ಜನರ ಈ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹೊಸ ಯೋಜನೆಯನ್ನು ರೂಪಿಸಿದೆ.

ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿದ ಫೋಟೋಗಳನ್ನು ತೆಗೆದು, ಅದನ್ನು ಶೇರ್ ಮಾಡಿದ್ದಲ್ಲಿ, ಅವರಿಗೆ 500 ರೂ. ಬಹುಮಾನ ಕೊಡುವ ಹೊಸ ಕಾನೂನನ್ನು ತರುವ ಬಗ್ಗೆ ಯೋಜಿಸಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.

ಭಾರತದ ನಗರಗಳಲ್ಲಿ ಕಾರುಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪಾರ್ಕಿಂಗ್ ಸಮಸ್ಯೆಯೂ ಉಂಟಾಗುತ್ತಿದೆ. ಕೆಲವು ಕುಟುಂಬಗಳಲ್ಲಿ ಪ್ರತಿಯೊಬ್ಬರೂ ಕಾರುಗಳನ್ನು ಹೊಂದಿರುವವರೂ ಇದ್ದಾರೆ. ಆದರೆ ಯಾರೂ ಪಾರ್ಕಿಂಗ್‌ಗೆ ಜಾಗವನ್ನೇ ನಿರ್ಮಿಸುತ್ತಿಲ್ಲ. ಉದಾಹರಣೆ ಕೊಡುವುದಾದರೆ ದೆಹಲಿಯಲ್ಲಿ ಇರುವ ವಿಶಾಲವಾದ ರಸ್ತೆಗಳನ್ನೇ ಜನರು ಪಾರ್ಕಿಂಗ್ ಜಾಗವಾಗಿ ಪರಿಗಣಿಸುತ್ತಿದ್ದಾರೆ ಎಂದು ಗಡ್ಕರಿ ತಿಳಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago