ಬೆಳಗಾವಿ: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರ ಮುಷ್ಕರ ಗುರುವಾರವೂ ಮುಂದುವರೆದಿದ್ದು, ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ನೌಕರರು ಮುಂದಿಟ್ಟ 9 ಬೇಡಿಕೆಗಳ ಪೈಕಿ ಸರ್ಕಾರ ಎಂಟು ಬೇಡಿಕೆಗಳನ್ನು ಈಡೇರಿಸಿದೆ. ಹೀಗಿದ್ದರೂ ಅವರು ನಮ್ಮ ಮನವಿ ಸ್ಪಂದಿಸದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತದೆ. ಇಂದು ಬೆಂಗಳೂರಿಗೆ ಹೋಗುತ್ತಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ. ಬಳಿಕ ನಿರ್ಧಾರ ಕೈಗೊಳ್ಳಿದ್ದೇನೆ” ಎಂದಿದ್ದಾರೆ.
ಮುಷ್ಕರಕ್ಕೆ ಕಾಂಗ್ರೆಸ್ ನಾಯಕರು ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ವಿಚಾರವನ್ನು ರಾಜಕೀಯಕ್ಕಾಗಿ ಬಳಸಿಕೊಂಡರೆ ನಾನು ಏನು ಹೇಳಲಿ. ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಬಗ್ಗೆ ಇಂದು ಸಂಜೆಯೊಳಗೆ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…