ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿಯವರು ನೌಕಾಪಡೆಯ ನೂತನ ಲಾಂಛನ ಮತ್ತು ಧ್ವಜವನ್ನು ಶುಕ್ರವಾರ ಅನಾವರಣಗೊಳಿಸಿದರು.
ಭಾರತದ ಮೊದಲ ಸ್ವದೇಶಿ ನಿರ್ಮಿತ ಯುದ್ದವಿಮಾನ ವಾಹಕ ನೌಕೆ ‘ಐಎನ್ಎಸ್ ವಿಕ್ರಾಂತ್’ನ್ನು ಇಲ್ಲಿನ ಹಡಗುಕಟ್ಟೆಯಲ್ಲಿ ನೌಕಾಪಡೆಯ ಸೇವೆಗೆ ನಿಯೋಜನೆಗೊಳಿಸಿದ ಬಳಿಕ ನೂತನ ಲಾಂಛನ ಮತ್ತು ಧ್ವಜ ಅನಾವರಣಗೊಳಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಲಾಂಛನವು ಜೀತದ ಪ್ರತೀಕದಂತಿತ್ತು. ಅದನ್ನು ಇದೀಗ ಇಳಿಸಲಾಗಿದೆ ಎಂದರು.
ಈ ಹಿಂದೆ ಬಿಳಿ ಧ್ವಜದ ಮೇಲಿನ ಎಡತುದಿಯಲ್ಲಿ ಭಾರತದ ಧ್ವಜವಿತ್ತು. ಇದು ಬ್ರಿಟಿಷ್ ಕ್ರಾಸ್ ಧ್ವಜದ ಮಧ್ಯಭಾಗದಲ್ಲಿತ್ತು. ಕ್ರಾಸ್ನ ಮಧ್ಯಭಾಗದಲ್ಲಿ ರಾಷ್ಟ್ರ ಲಾಂಛನವಿತ್ತು. ನೂತನವಾಗಿ ರೂಪಿಸಲಾದ ಧ್ವಜದಲ್ಲಿ ಕ್ರಾಸ್ನ್ನು ತೆಗೆದು ಹಾಕಲಾಗಿದೆ. ಲಾಂಛನವನ್ನು ಧ್ವಜದ ಬಲಭಾಗದಲ್ಲಿ ವಿನ್ಯಾಸಗೊಳಿಸಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…