ಹೊಸದಿಲ್ಲಿ : ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಭಾರೀ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮಹಾಘಟಬಂಧನ್ಗೆ ಬೆಂಬಲಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಹೇಳಿದರು.
“ಮಹಾಘಟಬಂಧನ್ ಮೇಲೆ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಶ್ಚರ್ಯಕರವಾಗಿದೆ. ಮೊದಲಿನಿಂದಲೇ ನ್ಯಾಯಸಮ್ಮತವಾಗಿರದ ಚುನಾವಣೆಯಲ್ಲಿ ನಾವು ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು.
ಬಿಹಾರ ತೀರ್ಪನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಹಿನ್ನಡೆ ಎಂದು ಕರೆದ ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಫಲಿತಾಂಶಗಳ ಬಗ್ಗೆ ಆಳವಾಗಿ ಪರಿಶೀಲನೆ ನಡೆಸುತ್ತದೆ ಎಂದು ಹೇಳಿದರು.
ಈ ಹೋರಾಟ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ಈ ಫಲಿತಾಂಶಗಳನ್ನು ಆಳವಾಗಿ ಪರಿಶೀಲಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ತಮ್ಮ ಪ್ರಯತ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುತ್ತದೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…