ವೆಲ್ಲಿಂಗ್ಟನ್: ನ್ಯೂಜಿಲೆಂಡ್ನ ಕ್ರಿಸ್ಟ್ ಚರ್ಚ್ ನಗರದ 2 ಮಸೀದಿಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಂಗ್ಲಾದೇಶದ ಕ್ರಿಕೆಟ್ ಟೀಂ ಪ್ರಾಣಾಪಾಯದಿಂದ ಪಾರಾಗಿದೆ.
ಬಾಂಗ್ಲಾದೇಶದ ಕ್ರಿಕೆಟ್ ತಂಡ ಶನಿವಾರ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಬೇಕಿತ್ತು. ಬಾಂಗ್ಲಾದೇಶದ ಕ್ರಿಕೆಟ್ ಆಟಗಾರರು ನಮಾಜ್ ಮಾಡಲು ಹೋಟೆಲ್ನಿಂದ ಹಾಗ್ಲೇ ಓವೆಲ್ ಸ್ಟೇಡಿಯಂ ಬಳಿಯಿರುವ ಮಸೀದಿಗೆ ಹೊರಟ್ಟಿದ್ದರು. ಈ ವೇಳೆ ಅಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದು, ಓರ್ವ ಮುಸುಕುಧಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಮಸ್ಜಿದ್ ಅಲ್ ನೂರ್ ಮಸೀದಿ ಪಕ್ಕದಲ್ಲೇ ಮತ್ತೊಂದು ಮಸೀದಿ ಇದ್ದು, ಶುಕ್ರವಾರದ ಪ್ರಾರ್ಥನೆಗಾಗಿ ಈ ಮಸೀದಿಯಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು ಎನ್ನಲಾಗಿದೆ. ಆದರೆ ಮಸ್ಜಿದ್ ಅಲ್ ನೂರ್ ಮಸೀದಿಯಲ್ಲಿ ಗುಂಡಿನ ದಾಳಿ ಆರಂಭವಾಗುತ್ತಲೇ, ಈ ಮಸೀದಿಯಲ್ಲಿದ್ದ ಜನರನ್ನು ಪೊಲೀಸರು ಸುರಕ್ಷಿತವಾಗಿ ತೆರವುಗೊಳಿಸಿದರು ಎನ್ನಲಾಗಿದೆ.
ಈ ಬಗ್ಗೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ತನ್ನ ಟ್ವಿಟ್ಟರಿನಲ್ಲಿ, “ನ್ಯೂಜಿಲೆಂಡ್ನ ಕ್ರೈಸ್ಟ್ ಚರ್ಚ್ ನಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಎಲ್ಲ ಆಟಗಾರರು ಗುಂಡಿನ ದಾಳಿ ಘಟನೆ ನಡೆದ ನಂತರ ಸುರಕ್ಷಿತವಾಗಿ ಹೋಟೆಲ್ಗೆ ತೆರಳಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟ್ ತಂಡದ ಜೊತೆ ನಾವು ಸಂಪರ್ಕದಲ್ಲಿದ್ದೇವೆ” ಎಂದು ಟ್ವೀಟ್ ಮಾಡಿದೆ.
ಮಸ್ಜಿದ್ ಅಲ್ ನೂರ್ ಮಸೀದಿಯಲ್ಲಿ ಗುಂಡಿನ ದಾಳಿ ನಡೆಸುತ್ತಿರುವ ಬಂದೂಕುಧಾರಿ ಮಿಲಿಟರಿ ಸಮವಸ್ತ್ರ ತೊಟ್ಟು, ಮಸೀದಿಯ ಒಳಪ್ರವೇಶಿಸಿದ್ದಾನೆ. ಬಳಿಕ ಪ್ರಾರ್ಥನೆ ಮಾಡುವವನಂತೆ ನಟಿಸುತ್ತಾ ಹಠಾತ್ತನೆ ಗುಂಡಿನ ದಾಳಿ ಆರಂಭಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…