ವೆಲ್ಲಿಂಗ್ಟನ್: ನ್ಯೂಜಿಲೆಂಡ್ನ ಕ್ರಿಸ್ಟ್ ಚರ್ಚ್ ನಗರದ 2 ಮಸೀದಿಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಂಗ್ಲಾದೇಶದ ಕ್ರಿಕೆಟ್ ಟೀಂ ಪ್ರಾಣಾಪಾಯದಿಂದ ಪಾರಾಗಿದೆ.
ಬಾಂಗ್ಲಾದೇಶದ ಕ್ರಿಕೆಟ್ ತಂಡ ಶನಿವಾರ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಬೇಕಿತ್ತು. ಬಾಂಗ್ಲಾದೇಶದ ಕ್ರಿಕೆಟ್ ಆಟಗಾರರು ನಮಾಜ್ ಮಾಡಲು ಹೋಟೆಲ್ನಿಂದ ಹಾಗ್ಲೇ ಓವೆಲ್ ಸ್ಟೇಡಿಯಂ ಬಳಿಯಿರುವ ಮಸೀದಿಗೆ ಹೊರಟ್ಟಿದ್ದರು. ಈ ವೇಳೆ ಅಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದು, ಓರ್ವ ಮುಸುಕುಧಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಮಸ್ಜಿದ್ ಅಲ್ ನೂರ್ ಮಸೀದಿ ಪಕ್ಕದಲ್ಲೇ ಮತ್ತೊಂದು ಮಸೀದಿ ಇದ್ದು, ಶುಕ್ರವಾರದ ಪ್ರಾರ್ಥನೆಗಾಗಿ ಈ ಮಸೀದಿಯಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು ಎನ್ನಲಾಗಿದೆ. ಆದರೆ ಮಸ್ಜಿದ್ ಅಲ್ ನೂರ್ ಮಸೀದಿಯಲ್ಲಿ ಗುಂಡಿನ ದಾಳಿ ಆರಂಭವಾಗುತ್ತಲೇ, ಈ ಮಸೀದಿಯಲ್ಲಿದ್ದ ಜನರನ್ನು ಪೊಲೀಸರು ಸುರಕ್ಷಿತವಾಗಿ ತೆರವುಗೊಳಿಸಿದರು ಎನ್ನಲಾಗಿದೆ.
ಈ ಬಗ್ಗೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ತನ್ನ ಟ್ವಿಟ್ಟರಿನಲ್ಲಿ, “ನ್ಯೂಜಿಲೆಂಡ್ನ ಕ್ರೈಸ್ಟ್ ಚರ್ಚ್ ನಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಎಲ್ಲ ಆಟಗಾರರು ಗುಂಡಿನ ದಾಳಿ ಘಟನೆ ನಡೆದ ನಂತರ ಸುರಕ್ಷಿತವಾಗಿ ಹೋಟೆಲ್ಗೆ ತೆರಳಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟ್ ತಂಡದ ಜೊತೆ ನಾವು ಸಂಪರ್ಕದಲ್ಲಿದ್ದೇವೆ” ಎಂದು ಟ್ವೀಟ್ ಮಾಡಿದೆ.
ಮಸ್ಜಿದ್ ಅಲ್ ನೂರ್ ಮಸೀದಿಯಲ್ಲಿ ಗುಂಡಿನ ದಾಳಿ ನಡೆಸುತ್ತಿರುವ ಬಂದೂಕುಧಾರಿ ಮಿಲಿಟರಿ ಸಮವಸ್ತ್ರ ತೊಟ್ಟು, ಮಸೀದಿಯ ಒಳಪ್ರವೇಶಿಸಿದ್ದಾನೆ. ಬಳಿಕ ಪ್ರಾರ್ಥನೆ ಮಾಡುವವನಂತೆ ನಟಿಸುತ್ತಾ ಹಠಾತ್ತನೆ ಗುಂಡಿನ ದಾಳಿ ಆರಂಭಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…