Featured

ನ್ಯೂಜಿಲೆಂಡ್​ ಕ್ರೈಸ್ಟ್​ಚರ್ಚ್​ನ ಮಸೀದಿಯಲ್ಲಿ ಗುಂಡಿನ ದಾಳಿ : ಅದೃಷ್ಟವಶಾತ್ ಪಾರಾದ ಬಾಂಗ್ಲಾ ಕ್ರಿಕೆಟ್ ಟೀಮ್ – Vishwanews24

ವೆಲ್ಲಿಂಗ್‍ಟನ್: ನ್ಯೂಜಿಲೆಂಡ್‍ನ ಕ್ರಿಸ್ಟ್ ಚರ್ಚ್ ನಗರದ 2 ಮಸೀದಿಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಂಗ್ಲಾದೇಶದ ಕ್ರಿಕೆಟ್ ಟೀಂ ಪ್ರಾಣಾಪಾಯದಿಂದ ಪಾರಾಗಿದೆ.

ಬಾಂಗ್ಲಾದೇಶದ ಕ್ರಿಕೆಟ್ ತಂಡ ಶನಿವಾರ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಬೇಕಿತ್ತು. ಬಾಂಗ್ಲಾದೇಶದ ಕ್ರಿಕೆಟ್ ಆಟಗಾರರು ನಮಾಜ್ ಮಾಡಲು ಹೋಟೆಲ್‍ನಿಂದ ಹಾಗ್ಲೇ ಓವೆಲ್ ಸ್ಟೇಡಿಯಂ ಬಳಿಯಿರುವ ಮಸೀದಿಗೆ ಹೊರಟ್ಟಿದ್ದರು. ಈ ವೇಳೆ ಅಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದು, ಓರ್ವ ಮುಸುಕುಧಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಮಸ್ಜಿದ್​ ಅಲ್​ ನೂರ್​ ಮಸೀದಿ ಪಕ್ಕದಲ್ಲೇ ಮತ್ತೊಂದು ಮಸೀದಿ ಇದ್ದು, ಶುಕ್ರವಾರದ ಪ್ರಾರ್ಥನೆಗಾಗಿ ಈ ಮಸೀದಿಯಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು ಎನ್ನಲಾಗಿದೆ. ಆದರೆ ಮಸ್ಜಿದ್​ ಅಲ್​ ನೂರ್​ ಮಸೀದಿಯಲ್ಲಿ ಗುಂಡಿನ ದಾಳಿ ಆರಂಭವಾಗುತ್ತಲೇ, ಈ ಮಸೀದಿಯಲ್ಲಿದ್ದ ಜನರನ್ನು ಪೊಲೀಸರು ಸುರಕ್ಷಿತವಾಗಿ ತೆರವುಗೊಳಿಸಿದರು ಎನ್ನಲಾಗಿದೆ.

ಈ ಬಗ್ಗೆ ಬಾಂಗ್ಲಾದೇಶದ ಕ್ರಿಕೆಟ್ ಬೋರ್ಡ್ ತನ್ನ ಟ್ವಿಟ್ಟರಿನಲ್ಲಿ, “ನ್ಯೂಜಿಲೆಂಡ್‍ನ ಕ್ರೈಸ್ಟ್ ಚರ್ಚ್ ನಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಎಲ್ಲ ಆಟಗಾರರು ಗುಂಡಿನ ದಾಳಿ ಘಟನೆ ನಡೆದ ನಂತರ ಸುರಕ್ಷಿತವಾಗಿ ಹೋಟೆಲ್‍ಗೆ ತೆರಳಿದ್ದಾರೆ. ಬಾಂಗ್ಲಾದೇಶದ ಕ್ರಿಕೆಟ್ ತಂಡದ ಜೊತೆ ನಾವು ಸಂಪರ್ಕದಲ್ಲಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಸ್ಜಿದ್​ ಅಲ್​ ನೂರ್​ ಮಸೀದಿಯಲ್ಲಿ ಗುಂಡಿನ ದಾಳಿ ನಡೆಸುತ್ತಿರುವ ಬಂದೂಕುಧಾರಿ ಮಿಲಿಟರಿ ಸಮವಸ್ತ್ರ ತೊಟ್ಟು, ಮಸೀದಿಯ ಒಳಪ್ರವೇಶಿಸಿದ್ದಾನೆ. ಬಳಿಕ ಪ್ರಾರ್ಥನೆ ಮಾಡುವವನಂತೆ ನಟಿಸುತ್ತಾ ಹಠಾತ್ತನೆ ಗುಂಡಿನ ದಾಳಿ ಆರಂಭಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

32 minutes ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

45 minutes ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

55 minutes ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

1 hour ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

1 hour ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

1 hour ago