ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶಿಸಿದೆ.
ಆರೆಸ್ಸೆಸ್ ಅಕ್ಟೋಬರ್ 19ರಂದು ನಡೆಸಲುದ್ದೇಶಿಸಿದ್ದ ಪಥ ಸಂಚಲನಕ್ಕೆ ಚಿತ್ತಾಪುರ ತಹಶೀಲ್ದಾರ್ ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ್ದರು. ಈ ಆದೇಶ ಕುರಿತು ಆರೆಸ್ಸೆಸ್ ಪರ ಅರ್ಜಿದಾರ ಅಶೋಕ್ ಪಾಟೀಲ್ ಕಲಬುರಗಿ ಹೈಕೋರ್ಟ್ ಪೀಠದ ಮೆಟ್ಟಿಲೇರಿದ್ದರು.
ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ, ಆರೆಸ್ಸೆಸ್ ಪಥ ಸಂಚಲನಕ್ಕೆ ಷರತ್ತುಬದ್ಧವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ.
25 ಮಂದಿ ಬ್ಯಾಂಡ್ ಸದಸ್ಯರನ್ನು ಸೇರಿದಂತೆ 300 ಗಣವೇಷಧಾರಿಗಳನ್ನು ಒಳಗೊಂಡ ಒಟ್ಟು 325 ಮಂದಿಗೆ ಪಥ ಸಂಚಲನಕ್ಕೆ ಅವಕಾಶ ನೀಡಿ ಆದೇಶಿಸಿದೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…