ನ.17ರಿಂದ ಶಬರಿಮಲೆ ಯಾತ್ರೆ ಆರಂಭ -Vishwanews24

Featured, ರಾಷ್ಟ್ರ ನ್ಯೂಸ್

ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್‌ಪಿಗಳು, 112 ಸಹಾಯಕ ಎಸ್‌ಪಿಗಳು, 264 ಇನ್ಸ್‌ಪೆಕ್ಟರ್‌ಗಳು ಮತ್ತು 1,185 ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.